ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಇಂದು ಚೆನ್ನೈಯ ವಿವಿಧೆಡೆ ಉಂಟಾದ ಪ್ರಕೃತಿ ವಿಕೋಪಗಳು 
ದೇಶ

'ಮಾಂಡೌಸ್' ಚಂಡಮಾರುತ: ಚೆನ್ನೈ ಸೇರಿದಂತೆ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಬೆಂಗಳೂರಿಗರು ಚಳಿಗೆ ಗಡ-ಗಡ

ಮಾಂಡೌಸ್ ಚಂಡಮಾರುತವು ಕಳೆದ ತಡರಾತ್ರಿ ತಮಿಳು ನಾಡು ಪ್ರವೇಶಿಸಿ ತೀವ್ರವಾಗಿದ್ದು, ಮಾಮಲ್ಲಪುರಂ ಬಳಿ ತೀವ್ರ ಭೂಕುಸಿತ ಉಂಟಾಗಿದೆ. ತಮಿಳುನಾಡಿನ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದೆ.

ಚೆನ್ನೈ: ಮಾಂಡೌಸ್ ಚಂಡಮಾರುತವು ಕಳೆದ ತಡರಾತ್ರಿ ತಮಿಳು ನಾಡು ಪ್ರವೇಶಿಸಿ ತೀವ್ರವಾಗಿದ್ದು, ಮಾಮಲ್ಲಪುರಂ ಬಳಿ ತೀವ್ರ ಭೂಕುಸಿತ ಉಂಟಾಗಿದೆ. ತಮಿಳುನಾಡಿನ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದೆ.

ಮಾಂಡೌಸ್ ಚಂಡಮಾರುತದದಿಂದಾಗಿ ಹಲವೆಡೆ ಭೂಕುಸಿತ, ಭಾರೀ ಗಾಳಿ, ಮಳೆಯಿಂದ ಪ್ರಕೃತಿ ವಿಕೋಪಗಳು ಸಂಭವಿಸಿದೆ ಎಂದು ಐಎಂಡಿ ಪ್ರಾದೇಶಿಕ ಹವಾಮಾನ ಕೇಂದ್ರದ ಮುಖ್ಯಸ್ಥ ಎಸ್ ಬಾಲಚಂದ್ರನ್ ಪಿಟಿಐಗೆ ತಿಳಿಸಿದರು.

ಚಂಡಮಾರುತವು ಭೂಮಿಗೆ ಹಾದುಹೋಗುವ ಪ್ರಭಾವದ ಅಡಿಯಲ್ಲಿ, ಹಲವಾರು ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯು ಕಂಡುಬಂದಿದೆ.

ಇಂದು ನಸುಕಿನ ಜಾವದಿಂದಲೇ 100 ಮಿಲಿ ಮೀಟರ್ ಮಳೆಯನ್ನು ದಾಟಿದೆ. ನಿನ್ನೆ ರಾತ್ರಿಯಿಂದ ಚೆನ್ನೈ ನಗರದಲ್ಲಿ 175 ರಿಂದ 200 ಮಿಮೀ ಮಳೆಯಾಗಿದೆ. ಬಲವಾದ ಗಾಳಿಯಿಂದಾಗಿ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸಾರಿಗೆ ಸೇವೆಗಳೂ ಅಸ್ತವ್ಯಸ್ತಗೊಂಡಿವೆ. ತಗ್ಗು ಪ್ರದೇಶದಲ್ಲಿ ನೆಲೆಸಿದ್ದ ಕುಟುಂಬಗಳನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವಾರು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ನೆರೆಯ ಪುದುಚೇರಿ, ಪಿಳ್ಳೈಚಾವಡಿ ಗ್ರಾಮದಲ್ಲಿ 15 ಮನೆಗಳು ಕುಸಿದಿವೆ.ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು, ವಿಲ್ಲುಪುರಂ, ಕಡಲೂರು, ಕಲ್ಲಕುರಿಚಿ, ವೆಲ್ಲೂರು ಮತ್ತು ರಾಣಿಪೇಟ್ ಸೇರಿದಂತೆ 15 ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚೆನ್ನೈ ಮತ್ತು ಸುತ್ತಮುತ್ತಲಿನ ಹಲವಾರು ಹವಾಮಾನ ಕೇಂದ್ರಗಳು ಬೆಳಿಗ್ಗೆ ತಲಾ 7 ಸೆಂ.ಮೀ ಮಳೆಯಾಗಿದೆ ಎಂದು ವರದಿ ಮಾಡಿವೆ. 16,000 ಪೊಲೀಸ್ ಸಿಬ್ಬಂದಿ, 1,500 ಗೃಹ ರಕ್ಷಕರು, ಟಿಎನ್ ರಾಜ್ಯ ವಿಪತ್ತು ನಿರ್ವಹಣಾ ಪಡೆಯ 40 ಸದಸ್ಯರ ತಂಡ, ಮತ್ತು 400 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಜೊತೆಗೆ 12 ಜಿಲ್ಲಾ ವಿಪತ್ತು ನಿರ್ವಹಣಾ ಪಡೆ ತಂಡಗಳು ಸನ್ನದ್ಧವಾಗಿವೆ.

ಬೆಂಗಳೂರು ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆ: ಮಾಂಡೌಸ್ ಚಂಡಮಾರುತ ಪ್ರಭಾವದಿಂದ ಬೆಂಗಳೂರಿನಲ್ಲಿ ನಿನ್ನೆ ಸಾಯಂಕಾಲ ಆರಂಭವಾದ ಮಳೆ ಇನ್ನೂ ಮುಂದುವರಿದಿದೆ. ಬೆಂಗಳೂರಿಗರು ಚಳಿಯ ಜೊತೆ ಶೀತಗಾಳಿ, ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮಳೆಯಿಂದಾಗಿ ಚಳಿ ತಾಳಲಾಗುತ್ತಿಲ್ಲ. ಆಫೀಸು, ಕಚೇರಿ ಕೆಲಸಗಳು, ವ್ಯವಹಾರಗಳು, ಶಾಲಾ ಕಾಲೇಜುಗಳಿಗೆ ತೆರಳುವವರಿಗೆ ಕಷ್ಟವಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​​​ (Yellow Alert) ಘೋಷಿಸಲಾಗಿದೆ. ಮಳೆಯಿಂದಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿನ್ನೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 21.6 ಡಿಗ್ರಿ ದಾಖಲಾಗಿತ್ತು. ಇದು ಕಳೆದ ವಾರದಲ್ಲಿ ವರದಿಯಾದ 26-28 ಡಿಗ್ರಿ ಸೆಲ್ಸಿಯಸ್​​ಗಿಂತ ಕಡಿಮೆಯಾಗಿದೆ. ಚಂಡಮಾರುತದಿಂದ ಚಳಿ, ಬಿರುಗಾಳಿ ಮತ್ತು ಮೋಡ ಕವಿದ ವಾತಾವರಣದಿಂದಾಗಿ ಬೆಂಗಳೂರಿನಲ್ಲಿ ವಿಪರೀತ ಚಳಿಯ ವಾತಾವರಣವಿದೆ. 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಾಂಡೌಸ್ ಚಂಡಮಾರುತ ಅಬ್ಬರಿಸುತ್ತಿದೆ. ಕರ್ನಾಟಕದ ದಕ್ಷಿಣ ಒಳನಾಡಿಗೆ ಇಂದು, ನಾಳೆ ಗುಡುಗು ಸಹಿತ ಮಳೆ ಪ್ರವೇಶಿಸುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯಿದೆ.

ಬೆಂಗಳೂರು ಮಾತ್ರವಲ್ಲದೆ ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆ ಹೆಚ್ಚಾಗಿದೆ. ಕೋಲಾರದಲ್ಲಿ ನಿನ್ನೆ ರಾತ್ರಿಯಿಂದ ಶೀತಗಾಳಿ ಸಹಿತ ಜಡಿ ಮಳೆ ಸುರಿಯುತ್ತಿದೆ. ರಾತ್ರಿಯಿಂದ‌ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಮತ್ತು ಗಾಳಿಯಿಂದ ಹೊರಬರಲು ಜನ ಹೆದರುವಂತಾಗಿದೆ. ಅಕಾಲಿಕ ಮಳೆಯಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಕಟಾವಿಗೆ ಬಂದ ಧಾನ್ಯಗಳಿಗೆ, ತೋಟಗಾರಿಕಾ ಬೆಳೆಗಳು ಹಾನಿಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT