ಉತ್ತರ ಪ್ರದೇಶದ ಪೊಲೀಸ್ ಪೇದೆ ಮನೋಜ್ ಕುಮಾರ್ 
ದೇಶ

'ಈ ರೊಟ್ಟಿನ ನಾಯಿ ಸಹ ತಿನ್ನಲ್ಲ' ಎಂದಿದ್ದ ಪೊಲೀಸ್ ಪೇದೆಯ 600 ಕಿಮೀ ದೂರದ ವರ್ಗಾವಣೆಗೆ ಅಲಹಾಬಾದ್ ಹೈಕೋರ್ಟ್ ತಡೆ

ಫಿರೋಜಾಬಾದ್ ಪೊಲೀಸ್ ಲೈನ್‌ನ ಮೆಸ್‌ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಉತ್ತರ ಪ್ರದೇಶದ ಪೊಲೀಸ್ ಪೇದೆ ಮನೋಜ್ ಕುಮಾರ್ ಅವರ ವರ್ಗಾವಣೆಗೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿದೆ.

ಪ್ರಯಾಗ್‌ರಾಜ್: ಫಿರೋಜಾಬಾದ್ ಪೊಲೀಸ್ ಲೈನ್‌ನ ಮೆಸ್‌ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಉತ್ತರ ಪ್ರದೇಶದ ಪೊಲೀಸ್ ಪೇದೆ ಮನೋಜ್ ಕುಮಾರ್ ಅವರ ವರ್ಗಾವಣೆಗೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿದೆ.

ಫಿರೋಜಾಬಾದ್‌ನಿಂದ ಗಾಜಿಪುರಕ್ಕೆ ವರ್ಗಾವಣೆಗೊಂಡ ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಪಂಕಜ್ ಭಾಟಿಯಾ ಅವರು ಈ ಆದೇಶ ನೀಡಿದ್ದಾರೆ.

2022ರ ಸೆಪ್ಟೆಂಬರ್ 20 ರ ವರ್ಗಾವಣೆ ಆದೇಶವು ಆಡಳಿತಾತ್ಮಕ ಆಧಾರದ ಮೇಲೆ ಮಾಡಲಾಗಿದೆ ಎಂದು ಹೇಳಿದ್ದರೂ, ಪೊಲೀಸ್ ಮೆಸ್‌ನಲ್ಲಿ ನೀಡಲಾಗುತ್ತಿರುವ ಕಳಪೆ ಆಹಾರದ ವಿರುದ್ಧ ಪ್ರತಿಭಟಿಸಿದ್ದರಿಂದ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಾಲಯ, ಈ ವಿಚಾರವನ್ನು ಪರಿಗಣಿಸುವ ಅಗತ್ಯವಿದೆ. ಪ್ರತಿವಾದಿಗಳು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿದಾರರು ಮರುಪ್ರಮಾಣ ಪತ್ರ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಿದೆ.

ವಿಚಾರಣೆಯ ಮುಂದಿನ ದಿನಾಂಕದವರೆಗೆ, ಅರ್ಜಿದಾರರು ಈಗಾಗಲೇ ಹೊಸ ಸ್ಥಳದಲ್ಲಿ ಸೇವೆಗೆ ಹಾಜರಾಗದ ಹೊರತು ಸೆಪ್ಟೆಂಬರ್ 20 ರ ವರ್ಗಾವಣೆ ಆದೇಶವನ್ನು ಜಾರಿಗೆ ತರಲಾಗುವುದಿಲ್ಲ ಎಂದು ಅದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT