ನಿತೀಶ್ ಕುಮಾರ್ 
ದೇಶ

2020 ಚುನಾವಣೆಯಲ್ಲಿ ಜೆಡಿಯು ವಿರುದ್ಧ ಬಿಜೆಪಿ ಪಿತೂರಿ: ನಿತೀಶ್ 

ಬಿಹಾರ ಸಿಎಂ ನಿತೀಶ್ ಕುಮಾರ್ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, 2020 ರ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ಹೊರತಾಗಿಯೂ ಜೆಡಿಯು ವಿರುದ್ಧ ಪಿತೂರಿ ನಡೆಸಿತ್ತು ಎಂದು ಆರೋಪಿಸಿದ್ದಾರೆ. 

ನವದೆಹಲಿ: ಬಿಹಾರ ಸಿಎಂ ನಿತೀಶ್ ಕುಮಾರ್ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, 2020 ರ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ಹೊರತಾಗಿಯೂ ಜೆಡಿಯು ವಿರುದ್ಧ ಪಿತೂರಿ ನಡೆಸಿತ್ತು ಎಂದು ಆರೋಪಿಸಿದ್ದಾರೆ.
 
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರೋಧಿಸುವ ಪಕ್ಷಗಳು ಒಂದಾಗಲು ಒಪ್ಪಿದರೆ ಬಿಜೆಪಿಯನ್ನು ಮಣಿಸಬಹುದು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
 
ಸಂಯಕ್ತ ಜನತಾದಳದ ಅಧಿವೇಶನವನ್ನುದ್ದೇಶಿಸಿ ಮಾತನಾಡಿರುವ ನಿತೀಶ್ ಕುಮಾರ್, ಕಳೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಸಾಧನೆಗೆ ಬಿಜೆಪಿಯೇ ಕಾರಣ ಎಂದು ನಿತೀಶ್ ಆರೋಪಿಸಿದ್ದಾರೆ.
 
ಅದು 2005 ಆಗಿರಲಿ ಅಥವಾ 2010 ಆಗಿರಲಿ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಹಿಂದೆಂದೂ ಇಷ್ಟು ಕಡಿಮೆ ಸ್ಥಾನಗಳನ್ನು ಪಡೆದಿಲ್ಲ ಎಂಬುದನ್ನು ಬಿಜೆಪಿಗೆ ನೆನಪಿಸಬೇಕು. 2020 ರಲ್ಲಿ ನಮ್ಮ ಅಭ್ಯರ್ಥಿಗಳನ್ನು ಸೋಲಿಸುವುದಕ್ಕಾಗಿಯೇ ಬಿಜೆಪಿಯವರು ಪಿತೂರಿ ನಡೆಸಿದ್ದರು ಎಂದು ನಿತೀಶ್ ಹೇಳಿದ್ದಾರೆ.
 
ತಾವು ಸಿಎಂ ಸ್ಥಾನದಲ್ಲಿ ಮುಂದುವರೆಯಲು ಇಚ್ಛಿಸಿರಲಿಲ್ಲ ಆದರೆ ಬಿಜೆಪಿಯ ಒತ್ತಾಯಕ್ಕೆ ಸಿಎಂ ಸ್ಥಾನ ಒಪ್ಪಿಕೊಂಡಿದ್ದೆ, ಬಿಹಾರಕ್ಕೆ ಕೇಂದ್ರದಿಂದ ಏನು ಸಿಗುತ್ತಿರಲಿಲ್ಲ. ಪ್ರಧಾನಿ ಮೋದಿ ಬ್ರಿಟೀಷರ ಅವಧಿಯಿಂದಲೂ ಸಂಪತ್ಭರಿತವಾದ ರಾಜ್ಯಕ್ಕೆ ಸೇರಿದವರಾಗಿದ್ದಾರೆ, ಬಡವರು ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗಲಿದೆ ಎಂದು ನಿತೀಶ್ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT