ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ ಬಳಿಯುತ್ತಿರುವುದು. 
ದೇಶ

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ: ಮೂವರು ಪೊಲೀಸರ ವಶಕ್ಕೆ

ಮಹಾತ್ಮಾ ಪುಲೆ ಹಾಗು ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ ಎರಚಿದ ಘಟನೆ ಶನಿವಾರ ನಡೆದಿದೆ.

ಬೆಳಗಾವಿ: ಮಹಾತ್ಮಾ ಪುಲೆ ಹಾಗು ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಮಸಿ ಎರಚಿದ ಘಟನೆ ಶನಿವಾರ ನಡೆದಿದೆ.

ಇತ್ತೀಚೆಗೆ ಮಹಾತ್ಮಾ ಪುಲೆ, ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಚಂದ್ರಕಾಂತ ಪಾಟೀಲ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಇದರಿಂದ ಕೋಪಗೊಂಡಿದ್ದ ವಿವಿಧ ಪಕ್ಷಗಳು ನಿನ್ನೆ ಬೆಳಗ್ಗೆ ಪಿಂಪ್ರಿ ಡಾ. ಬಾಬಾ ಸಾಹೇಬ್​ ಅಂಬೇಡ್ಕರ್​ ಚೌಕ್​ನಲ್ಲಿ ಪ್ರತಿಭಟನೆ ನಡೆಸಿದ್ದರು.

ಉದ್ಧವ್ ಠಾಕ್ರೆ ಅವರ ಶಿವಸೇನೆ ಗುಂಪು ಕೂಡ ಕಾರ್ಯಕ್ರಮದ ಸ್ಥಳದ ಬಳಿ ಪ್ರತಿಭಟನೆ ನಡೆಸಿ ಚಂದ್ರಕಾಂತ್ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಈ ಪ್ರತಿಭಟನೆಯಲ್ಲಿದ್ದ ಯುವಕನೋರ್ವ ಪಕ್ಕದಲ್ಲೇ ಬೆಂಗಾವಲು ಸಿಬ್ಬಂದಿಯಿದ್ದರೂ ಚಂದ್ರಕಾಂತ ಪಾಟೀಲರ ಮುಖಕ್ಕೆ ಮಸಿ ಎರಚಿ ಪರಾರಿಯಾಗಲು ಯತ್ನಿಸಿದ್ದ.

ಈ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಪೊಲೀಸರು ಯುವಕ ಹಾಗೂ ಪ್ರತಿಭಟನೆಯಲ್ಲಿದ್ದು ಕೃತ್ಯದಲ್ಲಿ ಜೊತೆಗಿದ್ದ ಇನ್ನಿಬ್ಬರನ್ನು ವಶಕ್ಕೆ ಪಡೆದುಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT