ನಾಗ್ಪುರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ ಪ್ರಧಾನಿ ಮೋದಿ. 
ದೇಶ

ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ: ನಾಗ್ಪುರ-ಬಿಲಾಸ್ಪುರ್ ವಂದೇ ಭಾರತ್ ಎಕ್ಸ್​ಪ್ರೆಸ್​'ಗೆ ಚಾಲನೆ

ಮಹಾರಾಷ್ಟ್ರ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಭೇಟಿ ನೀಡಿದ್ದು, ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾನುವಾರ ಚಾಲನೆ ನೀಡಿದರು.

ನವದೆಹಲಿ: ಮಹಾರಾಷ್ಟ್ರ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಭೇಟಿ ನೀಡಿದ್ದು, ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾನುವಾರ ಚಾಲನೆ ನೀಡಿದರು.

ಮಹಾರಾಷ್ಟ್ರ ರಾಜ್ಯ ಭೇಟಿ ನೀಡಿದ ಮೋದಿಯವರನ್ನು ಮಹಾರಾಷ್ಟ್ರ ರಾಜ್ಯಪಾಲ ಕೊಶಿಯಾರಿ, ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡಣಾವೀಸ್‌ ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ಮೋದಿಯವರು ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು. ರೈಲಿಗೆ ಚಾಲನೆ ನೀಡಿದ ಬಳಿಕ ಮೋದಿಯವರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರತ್ತ ಕೈ ಬೀಸಿದರು. ಇದೇ ವೇಳೆ ಪ್ರಧಾನಮಂತ್ರಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಅಡಿಗಲ್ಲು ಹಾಕಿದರು.

ರೈಲಿಗೆ ಚಾಲನೆ ನೀಡಿದ ಬಳಿಕ ಮೋದಿಯವರು, ನಂತರ ಟಿಕೆಟ್ ಖರೀದಿಸಿ ವಿದ್ಯಾರ್ಥಿಗಳೊಂದಿಗೆ ಪ್ರಯಾಣ ಮಾಡಿದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಮಾತುಕತೆಯನ್ನೂ ನಡೆಸಿದರು.

ಮೋದಿಯವರು ಚಾಲನೆ ನೀಡಿರುವ ಈ ರೈಲು ಬೆಳಗ್ಗೆ 6.45ಕ್ಕೆ ಬಿಲಾಸ್‌ಪುರದಿಂದ ಹೊರಟು ಮಧ್ಯಾಹ್ನ 12.15ಕ್ಕೆ ನಾಗ್ಪುರ ತಲುಪಲಿದೆ. ಅದೇ ರೀತಿ ನಾಗ್ಪುರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ರಾತ್ರಿ 7.35ಕ್ಕೆ ಬಿಲಾಸ್ಪುರ ತಲುಪಲಿದೆ.

ಸೂಪರ್‌ಫಾಸ್ಟ್ ರೈಲುಗಳು ನಾಗಪುರವನ್ನು ತಲುಪಲು ಸುಮಾರು ಏಳು ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಆದರೆ, ವಂದೇ ಭಾರತ್ ರೈಲು ಸುಮಾರು ಐದೂವರೆ ಗಂಟೆಗಳಲ್ಲಿ ತಲುಪಲಿದೆ.

ವಂದೇ ಭಾರತ್ ರೈಲು ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಮೊದಲ ಬಾರಿಗೆ ಉದ್ಘಾಟನೆಗೊಂಡಿತು. ಮುಂದಿನ ವರ್ಷ ಆಗಸ್ಟ್ ವೇಳೆಗೆ 75 ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸುವ ಗುರಿಯನ್ನು ರೈಲ್ವೇ ಹೊಂದಿದೆ.

ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿನ ಎಲ್ಲಾ ಕೋಚ್‌ಗಳು ಸ್ವಯಂಚಾಲಿತ ಬಾಗಿಲುಗಳು, ಜಿಪಿಎಸ್-ಆಧಾರಿತ ಆಡಿಯೊ-ವಿಶುವಲ್ ಪ್ಯಾಸೆಂಜರ್ ಮಾಹಿತಿ ವ್ಯವಸ್ಥೆ, ಮನರಂಜನಾ ಉದ್ದೇಶಗಳಿಗಾಗಿ ಆನ್‌ಬೋರ್ಡ್ ಹಾಟ್‌ಸ್ಪಾಟ್ ವೈ-ಫೈ ಮತ್ತು ಆರಾಮದಾಯಕ ಆಸನಗಳನ್ನು ಹೊಂದಿವೆ. ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಫೆಬ್ರವರಿ 15, 2019 ರಂದು ನವದೆಹಲಿ-ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗದಲ್ಲಿ ಚಾಲನೆ ನೀಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT