ಅಖಿಲೇಶ್ ಯಾದವ್ 
ದೇಶ

2024ಕ್ಕೆ ಕೇಂದ್ರದಲ್ಲಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ: ಅಖಿಲೇಶ್ ಯಾದವ್

2024ಕ್ಕೆ ಕೇಂದ್ರದಲ್ಲಿ ಪ್ರಸ್ತುತ ಸರ್ಕಾರಕ್ಕೆ ಪ್ರತಿಯಾಗಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ ಮತ್ತು ವಿರೋಧ ಪಕ್ಷದ ನಾಯಕರು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್...

ನವದೆಹಲಿ: 2024ಕ್ಕೆ ಕೇಂದ್ರದಲ್ಲಿ ಪ್ರಸ್ತುತ ಸರ್ಕಾರಕ್ಕೆ ಪ್ರತಿಯಾಗಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ ಮತ್ತು ವಿರೋಧ ಪಕ್ಷದ ನಾಯಕರು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೋಮವಾರ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಮಾಜಿ ಸಿಎಂ, ಹಣದುಬ್ಬರ ಉತ್ತುಂಗದಲ್ಲಿದ್ದು, ನಿರುದ್ಯೋಗ ಹೆಚ್ಚುತ್ತಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಲ್ಲ ಭಾರತೀಯರಿಗೆ ನೀಡಿದ್ದ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವುದರಿಂದ ಕೇಂದ್ರದಲ್ಲಿ 'ಪರ್ಯಾಯ' ಸರ್ಕಾರ ರಚನೆ ಇಂದಿನ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

"2024ಕ್ಕೆ ಪರ್ಯಾಯ ಸರ್ಕಾರ ರಚಿಸಲು ನಿರಂತರ ಕಸರತ್ತು ನಡೆಯುತ್ತಿದೆ. ನಿತೀಶ್‌ಜಿ, ಮಮತಾಜಿ ಮತ್ತು ಕೆಸಿಆರ್ ಸಾಹೆಬ್ ಅದಕ್ಕಾಗಿ ಶ್ರಮಿಸುತ್ತಿದ್ದಾರೆ. ಹಣದುಬ್ಬರ ಉತ್ತುಂಗದಲ್ಲಿರುವಾಗ ಪರ್ಯಾಯ ಸರ್ಕಾರದ ಅಗತ್ಯವಿದೆ" ಎಂದು ಯಾದವ್ ಹೇಳಿದರು.

'ಉತ್ತರ ಪ್ರದೇಶದ ಜನರಿಗೆ ದ್ರೋಹ ಮಾಡಲಾಗಿದೆ. ಉತ್ತರ ಪ್ರದೇಶವು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿರಬೇಕು. ಆದರೆ ಈಗ ಎಲ್ಲಿದೆ?' ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದರು.

ಉತ್ತರ ಪ್ರದೇಶದಿಂದ ಲೋಕಸಭೆಗೆ ಆಯ್ಕೆಯಾಗಿರುವ ಅವರ ಪತ್ನಿ ಡಿಂಪಲ್ ಯಾದವ್ ಸೋಮವಾರ ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT