ಸಾಂದರ್ಭಿಕ ಚಿತ್ರ 
ದೇಶ

ಉತ್ತರಪ್ರದೇಶ: ಮದುವೆ ಸಮಾರಂಭದಲ್ಲಿ ಊಟ ಮುಟ್ಟಿದ್ದಕ್ಕೆ ದಲಿತ ಯುವಕನಿಗೆ ಥಳಿತ

18 ವರ್ಷದ ದಲಿತ ಯುವಕನೊಬ್ಬ ಮದುವೆ ಸಮಾರಂಭದಲ್ಲಿ ಆಹಾರವನ್ನು ಮುಟ್ಟಿದ್ದಕ್ಕಾಗಿ ಆತನನ್ನು ನಿಂದಿಸಿ ಅಮಾನುಷವಾಗಿ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಗೊಂಡಾ: 18 ವರ್ಷದ ದಲಿತ ಯುವಕನೊಬ್ಬ ಮದುವೆ ಸಮಾರಂಭದಲ್ಲಿ ಆಹಾರವನ್ನು ಮುಟ್ಟಿದ್ದಕ್ಕಾಗಿ ಆತನನ್ನು ನಿಂದಿಸಿ ಅಮಾನುಷವಾಗಿ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ವಜೀರ್‌ಗಂಜ್‌ನಲ್ಲಿ ಈ ಘಟನೆ ನಡೆದಿದ್ದು, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೌಬಸ್ತಾ ಗ್ರಾಮದ ನಿವಾಸಿ ರೇಣು ಮಾತನಾಡಿ, ತನ್ನ ಕಿರಿಯ ಸಹೋದರ ಲಲ್ಲಾ(18) ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದ ಮತ್ತು ಸಂದೀಪ್ ಪಾಂಡೆ ಎಂಬುವವರ ಮನೆಯಲ್ಲಿ ಔತಣವನ್ನು ಏರ್ಪಡಿಸಲಾಗಿತ್ತು.

ಲಲ್ಲಾ ತನಗಾಗಿ ಒಂದು ತಟ್ಟೆಯನ್ನು ತೆಗೆದುಕೊಂಡ ತಕ್ಷಣ, ಸಂದೀಪ್ ಮತ್ತು ಅವನ ಸಹೋದರರು ಆತನನ್ನು ನಿಂದಿಸಿ ಥಳಿಸಿದ್ದಾರೆ. ಲಲ್ಲಾನ ಹಿರಿಯ ಸಹೋದರ ಸತ್ಯಪಾಲ್ ಅವರನ್ನು ರಕ್ಷಿಸಲು ಮುಂದಾದಾಗ, ಆತನನ್ನು ಥಳಿಸಿ ಅವರ ಮೋಟಾರ್ ಸೈಕಲ್‌ಗೆ ಹಾನಿ ಮಾಡಿದ್ದಾರೆ.

ಸಂದೀಪ್ ಮತ್ತು ಆತನ ಸಹೋದರರ ನಡತೆಯ ಬಗ್ಗೆ ನಾವು ಗ್ರಾಮ ಪ್ರಧಾನ ಮತ್ತು ಗ್ರಾಮದ ಹಿರಿಯರಿಗೆ ತಿಳಿಸಿದ್ದೇವೆ. ಈ ವಿಷಯ ತಿಳಿದ ಆರೋಪಿಗಳು ನಮ್ಮ ಮನೆಗೆ ನುಗ್ಗಿ ಲಲ್ಲಾಗೆ  ಮತ್ತೆ ಥಳಿಸಿ ವಿಧ್ವಂಸಕ ಕೃತ್ಯ ಎಸಗಿದ್ದಾರೆ ಎಂದು ರೇಣು ಆರೋಪಿಸಿದ್ದಾರೆ.

ಗೊಂಡಾದ ಎಎಎಸ್‌ಪಿ ಶಿವರಾಜ್ ಮಾತನಾಡಿ, ದುಡುಕಿನ ಅಥವಾ ನಿರ್ಲಕ್ಷ್ಯದಿಂದ ಮಾನವ ಜೀವ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು, ಕ್ರಿಮಿನಲ್ ಬೆದರಿಕೆ ಮತ್ತು ದಂಗೆ ಅಡಿಯಲ್ಲಿ ಆರೋಪಿಗಳಾದ ಸಂದೀಪ್ ಪಾಂಡೆ, ಅಮರೇಶ್ ಪಾಂಡೆ, ಶ್ರವಣ್ ಪಾಂಡೆ, ಸೌರಭ್ ಪಾಂಡೆ, ಅಜಿತ್ ಪಾಂಡೆ, ವಿಮಲ್ ಪಾಂಡೆ ಮತ್ತು ಅಶೋಕ್ ಪಾಂಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT