ತವಾಂಗ್ ಸಂಘರ್ಷ 
ದೇಶ

ತವಾಂಗ್ ಸಂಘರ್ಷ: ಮೋದಿ ಸರ್ಕಾರ ಗಡಿ ವಿಚಾರಗಳನ್ನು ಹತ್ತಿಕ್ಕುತ್ತಿದೆ: ಕಾಂಗ್ರೆಸ್ ತರಾಟೆ

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಎಲ್‌ಎಸಿ ನಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಚಾರವಾಗಿ ಮೋದಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಮೋದಿ ಸರ್ಕಾರ ಗಡಿ ವಿಚಾರಗಳನ್ನು ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದೆ.

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಎಲ್‌ಎಸಿ ನಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಚಾರವಾಗಿ ಮೋದಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಮೋದಿ ಸರ್ಕಾರ ಗಡಿ ವಿಚಾರಗಳನ್ನು ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದೆ.

ತವಾಂಗ್ ಸಂಘರ್ಷ ವಿಚಾರವಾಗಿ ಸೋಮವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷ, ಮೋದಿ ಸರ್ಕಾರವು ಗಡಿ ಸಮಸ್ಯೆಯನ್ನು ಹತ್ತಿಕ್ಕುತ್ತಿದೆ, ಇದರಿಂದಾಗಿ ಚೀನಾ ಹೆಚ್ಚುತ್ತಿರುವ ಧೈರ್ಯದಿಂದ ವರ್ತಿಸುತ್ತಿದೆ ಎಂದು ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಎಐಸಿಸಿ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಗಡಿಯಲ್ಲಿ ಚೀನಾದ ಕ್ರಮಗಳ ಬಗ್ಗೆ ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರವನ್ನು "ಎಚ್ಚರಗೊಳಿಸಲು" ಪ್ರಯತ್ನಿಸುತ್ತಿದೆ. ಆದರೆ "ತನ್ನ ರಾಜಕೀಯ ಇಮೇಜ್ ಅನ್ನು ರಕ್ಷಿಸಿಕೊಳ್ಳಲು" ಅದು ಮೌನವಾಗಿದೆ. ಸಶಸ್ತ್ರ ಪಡೆಗಳ ಶೌರ್ಯದ ಬಗ್ಗೆ ನಮಗೆ ಹೆಮ್ಮೆ ಇದೆ.

ಗಡಿಯಲ್ಲಿ ಚೀನಾದ ಕ್ರಮಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಕಳೆದ ಎರಡು ವರ್ಷಗಳಿಂದ ನಾವು ಪದೇ ಪದೇ ಸರ್ಕಾರವನ್ನು ಎಚ್ಚರಿಸಲು ಪ್ರಯತ್ನಿಸುತ್ತಿದ್ದೇವೆ, ಆದರೆ ಮೋದಿ ಸರ್ಕಾರವು ವಿಷಯವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಅದರ ರಾಜಕೀಯ ಚಿತ್ರಣವನ್ನು ಉಳಿಸಿ, ಚೀನಾದ ದಿಟ್ಟತನವು ಇದರಿಂದ ಬೆಳೆಯುತ್ತಿದೆ" ಎಂದು ಟ್ವೀಟ್ ಮಾಡಿದ್ದಾರೆ.

"ದೇಶಕ್ಕಿಂತ ಯಾರೂ ದೊಡ್ಡವರಲ್ಲ.. ಆದರೆ ಮೋದಿ ಜಿ ತಮ್ಮ ಇಮೇಜ್ ಉಳಿಸಿಕೊಳ್ಳಲು ದೇಶವನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ.. LAC ಯೊಂದಿಗಿನ ಹೊಸ ಬೆಳವಣಿಗೆಯು ಆತಂಕಕಾರಿಯಾಗಿದೆ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

ಗಾಲ್ವಾನ್ ಘರ್ಷಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ವೀಡಿಯೊವನ್ನು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದರಲ್ಲಿ "ನಮ್ಮ ಭೂಮಿಯನ್ನು ಯಾರೂ ಆಕ್ರಮಿಸಿಲ್ಲ ಮತ್ತು ಯಾರೂ ಭಾರತವನ್ನು ಪ್ರವೇಶಿಸಿಲ್ಲ ಮತ್ತು ನಮ್ಮ ಯಾವುದೇ ಪೋಸ್ಟ್ ಗಳು ಬೇರೆಯವರ ನಿಯಂತ್ರಣದಲ್ಲಿಲ್ಲ" ಎಂದು ಪ್ರಧಾನಿ ಹೇಳಿದ್ದಾರೆ. ಈ ತಪ್ಪನ್ನು ಮಾಡದೇ ಇದ್ದಿದ್ದರೆ, ಚೀನಾ ಎಂದು ಹೆಸರಿಸಿದ್ದರೆ, ಅದು ಭಾರತದತ್ತ ಕಣ್ಣು ಹಾಕಲು ಧೈರ್ಯ ಮಾಡುತ್ತಿರಲಿಲ್ಲ... ಇನ್ನೂ ಸಮಯವಿದೆ ... ಭಯಪಡಬೇಡಿ," ಎಂದು ಕಾಂಗ್ರೆಸ್ ಪ್ರಧಾನಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ.

ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಘರ್ಷಣೆ ನಡೆಸಿದ್ದು, ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಸೇನೆಯು ಹೇಳಿದ ನಂತರ ಈ ಪ್ರತಿಕ್ರಿಯೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT