ಸಾಕೇತ್ ಗೋಖಲೆ 
ದೇಶ

ಸಾಕೇತ್ ಗೋಖಲೆ ಕಿರುಕುಳದ ಕುರಿತು ಸಿಇಸಿಯನ್ನು ಭೇಟಿ ಮಾಡಿದ ಟಿಎಂಸಿ ನಿಯೋಗ

ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಐವರು ಸದಸ್ಯರ ಸಂಸದೀಯ ನಿಯೋಗ ಮುಖ್ಯ ಚುನಾವಣಾ ಆಯುಕ್ತ(ಸಿಇಸಿ)ರನ್ನು ಭೇಟಿ ಮಾಡಿ ಪಕ್ಷದ ವಕ್ತಾರ ಸಾಕೇತ್ ಗೋಖಲೆರನ್ನು ಗುಜರಾತ್ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ದಾಖಲಿಸಿದರು.

ನವದೆಹಲಿ: ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಐವರು ಸದಸ್ಯರ ಸಂಸದೀಯ ನಿಯೋಗ ಮುಖ್ಯ ಚುನಾವಣಾ ಆಯುಕ್ತ(ಸಿಇಸಿ)ರನ್ನು ಭೇಟಿ ಮಾಡಿ ಪಕ್ಷದ ವಕ್ತಾರ ಸಾಕೇತ್ ಗೋಖಲೆರನ್ನು ಗುಜರಾತ್ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ದಾಖಲಿಸಿದರು.

ಟಿಎಂಸಿ ಸಂಸದ ಸೌಗತ ರಾಯ್, 'ನಮ್ಮ ರಾಷ್ಟ್ರೀಯ ವಕ್ತಾರರಿಗೆ ಕಿರುಕುಳ ನೀಡಿದ್ದ ಬಗ್ಗೆ ನಿಯೋಗವು ಸಿಇಸಿಯನ್ನು ಭೇಟಿ ಮಾಡಿದೆ. ಈ ವೇಳೆ ಗೋಖಲೆಯನ್ನು ಅಹಮದಾಬಾದ್‌ನಲ್ಲಿ ಬಂಧಿಸಲಾಯಿತು. ನಂತರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಮೊರ್ಬಿಯಲ್ಲಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾಗಿ ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ಅಸಂಗತತೆಯನ್ನು ಉತ್ತೇಜಿಸುವ ವ್ಯವಹರಿಸುವ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ 125 ರ ಅಡಿಯಲ್ಲಿ ಗೋಖಲೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಮೊರ್ಬಿ (ಗುಜರಾತ್) ಸೇತುವೆ ಕುಸಿತದ ನಂತರ ಪ್ರಧಾನಿ ಅಲ್ಲಿಗೆ ಭೇಟಿ ನೀಡಿದ ಟ್ವೀಟ್‌ಗಾಗಿ ಗೋಖಲೆ ಅವರನ್ನು ಬಂಧಿಸಲಾಯಿತು. ಇದರ ನಂತರ, ಪತ್ರಿಕಾ ಮಾಹಿತಿ ಬ್ಯೂರೋ ಸಂಬಂಧಿತ ಮಾಹಿತಿಯನ್ನು ನಕಲಿ ಎಂದು ಹೇಳಿದೆ.

ರಾಜಸ್ಥಾನ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಗುಜರಾತ್ ಪೊಲೀಸರು ಡಿಸೆಂಬರ್ 6ರಂದು ಜೈಪುರದಿಂದ ಗೋಖಲೆ ಅವರನ್ನು ಬಂಧಿಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಅವರನ್ನು ಅಹಮದಾಬಾದ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಡಿಸೆಂಬರ್ 8 ರಂದು ನ್ಯಾಯಾಲಯದಿಂದ ಜಾಮೀನು ನೀಡಲಾಯಿತು. ಆದರೆ ಮತ್ತೊಂದು ಪ್ರಕರಣದಲ್ಲಿ ಗಂಟೆಗಳ ನಂತರ ಮತ್ತೆ ಬಂಧಿಸಲಾಯಿತು. ನಂತರ ಡಿಸೆಂಬರ್ 9 ರಂದು ಎರಡನೇ ಪ್ರಕರಣದಲ್ಲಿ ಗೋಖಲೆ ಅವರಿಗೆ ಜಾಮೀನು ಸಿಕ್ಕಿತ್ತು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು 'ಗುಜರಾತ್‌ನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುವಾಗ ಕೋಮುವಾದ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ದ್ವೇಷವನ್ನು ಪ್ರಚಾರ ಮಾಡಿದರು. ಮತ್ತೊಬ್ಬ ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್‌ ಅವರು ಬಂಗಾಳಿ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದರು ಅವರ ವಿರುದ್ಧ ಏಕೆ ಸೆಕ್ಷನ್‌ಗಳನ್ನು ವಿಧಿಸಲಿಲ್ಲ' ಎಂದು ಸಿಇಸಿಯನ್ನು ಪ್ರಶ್ನಿಸಿದರು.

ಡಿಸೆಂಬರ್ 1, 2022ರಂದು ಸಾಕೇತ್ ಗೋಖಲೆ ಅವರು ಸೇತುವೆ ಕುಸಿತದ ಘಟನೆಯ ನಂತರ ಗುಜರಾತ್‌ನ ಮೊರ್ಬಿಗೆ ಪ್ರಧಾನಿ ಮೋದಿಯವರ ಭೇಟಿಗಾಗಿ ಕೇವಲ ಕೆಲವು ಗಂಟೆಗಳ ಕಾಲ 30 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದರು. ತಥಾಕಥಿತ ವರದಿಯನ್ನು ಉಲ್ಲೇಖಿಸಿದ ಗೋಖಲೆ ಅವರು 5.5 ಕೋಟಿ ರೂ.ಗಳು ಕೇವಲ ಸ್ವಾಗತ, ಕಾರ್ಯಕ್ರಮ ನಿರ್ವಹಣೆ ಮತ್ತು ಛಾಯಾಗ್ರಹಣಕ್ಕಾಗಿ ಮಾತ್ರ ಬಳಸಲಾಗಿದೆ. ಮೋದಿ ಅವರ ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಪಿಆರ್‌ಗೆ 135 ಜನರ ಪ್ರಾಣಕ್ಕಿಂತ ಹೆಚ್ಚಿನ ಬೆಲೆ ಇದೆ ಎಂದು ಅವರು ಹೇಳಿದ್ದಾರೆ. ಏಕೆಂದರೆ ದುರಂತದಲ್ಲಿ ಮೃತಪಟ್ಟ 135 ಕುಟುಂಬಗಳಿಗೆ ಕೇವಲ 4 ಲಕ್ಷ ರೂ. ಪರಿಹಾರ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT