ಸಂಸದ ತೇಜಸ್ವಿ ಸೂರ್ಯ 
ದೇಶ

ಬೆಂಗಳೂರು: ಮಧ್ಯಮ ವರ್ಗದ ಸಂಬಳದಾರರ ಮನೆ ಬಾಡಿಗೆ ಭತ್ಯೆ 50% ಹೆಚ್ಚಳಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ

ಬೆಂಗಳೂರು ನಗರವನ್ನು ದೇಶದ ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಮೂಲಕ, ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. 

ನವದೆಹಲಿ: ಬೆಂಗಳೂರು ಮತ್ತು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಇತರ ಸಮನಾದ ನಗರಗಳನ್ನು ದೇಶದ ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಮೂಲಕ, ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. 

ಇಂದು (ಡಿ.13) ರಂದು ಸಂಸತ್ ಕಲಾಪದ ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಷಯಗಳ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿರುವ ಸಂಸದ ತೇಜಸ್ವೀ ಸೂರ್ಯ, ಆದಾಯ ತೆರಿಗೆ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ತಂದು ಪ್ರಸ್ತುತ ಶೇ, 40 ರಷ್ಟು ಇರುವ ಮನೆ ಬಾಡಿಗೆ ಭತ್ಯೆಯನ್ನು ಶೇ.50 ಕ್ಕೆ ಏರಿಸುವಂತೆ ಒತ್ತಾಯಿಸಿದ್ದಾರೆ.

"ಬೆಂಗಳೂರು ಮಹಾನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅತ್ಯಂತ ಪ್ರಮುಖ ನಗರವಾಗಿದ್ದು, ಸಂಬಳದಾರ ವರ್ಗವು ಅತಿ ಹೆಚ್ಚು ವಾಸಿಸುವ ದೇಶದ ಮುಖ್ಯ ನಗರವಾಗಿದೆ. ದೆಹಲಿ, ಚೆನ್ನೈ, ಮುಂಬೈ ಮತ್ತು ಕೊಲ್ಕತ್ತಾ ಗಳ ಸಾಲಿಗೆ ಬೆಂಗಳೂರನ್ನು ಕೂಡ ಸೇರಿಸಿದಲ್ಲಿ, ನಗರದ ಮಧ್ಯಮ ವರ್ಗದ ಸಂಬಳದಾರ ವರ್ಗದ ಜನತೆಗೆ  ಸಾಕಷ್ಟು ಅನುಕೂಲವಾಗಲಿದೆ. ಆದಾಯ ತೆರಿಗೆ ನಿಯಮಾವಳಿಗಳನ್ನು ಪರಾಮರ್ಶಿಸುವ ಮೂಲಕ ಬೆಂಗಳೂರು ನಗರದ ಜನತೆಯ ಮನೆ ಬಾಡಿಗೆ ಭತ್ಯೆ ಹೆಚ್ಚಳಕ್ಕೆ ಮನವಿ ಮಾಡುತ್ತೇನೆ" ಎಂದು ವಿವರಿಸಿದರು.

1.18 ಕೋಟಿ ಮಂದಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಕರ್ನಾಟಕದ ಜಿಡಿಪಿ ಗೆ 80% ರಷ್ಟು ಕೊಡುಗೆ ನೀಡುತ್ತಿದೆ. ಭಾರತದ ಸಿಲಿಕಾನ್ ವ್ಯಾಲಿ ಎಂದಲೂ ಕರೆಯಲ್ಪಡುವ ಬೆಂಗಳೂರು ಅನೇಕ ಸ್ಟಾರ್ಟ್ - ಅಪ್ ಗಳ ತವರಾಗಿದ್ದು. 
ಬೆಂಗಳೂರು ಮತ್ತು ಇತರ ಬೆಳವಣಿಗೆ ಹೊಂದುತ್ತಿರುವ ನಗರಗಳಲ್ಲಿ ಮನೆ ಬಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ, ಬೆಂಗಳೂರು ಮತ್ತು ಇಂತಹ ನಗರಗಳನ್ನು ಮಹಾ ನಗರಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದಲ್ಲಿ ಮಧ್ಯಮ ವರ್ಗದ ಸಂಬಳದಾರ ವರ್ಗದ ಜನತೆಗೆ ಅನುಕೂಲವಾಗಲಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್