ಪುಣೆ ಬಂದ್ 
ದೇಶ

ಪುಣೆ ಬಂದ್: ಶಿವಾಜಿ ಮಹಾರಾಜ್, ಇತರರ ವಿರುದ್ಧ ಟೀಕೆ ವಿರೋಧಿಸಿ ಮೌನ ಮೆರವಣಿಗೆ

ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ರಾಜ್ಯದ ಇತರ ಅಪ್ರತಿಮ ನಾಯಕರ ವಿರುದ್ಧದ ಹೇಳಿಕೆಗಳನ್ನು ಖಂಡಿಸಿ ಪ್ರತಿಪಕ್ಷಗಳು ಮಂಗಳವಾರ ಪುಣೆ `ಬಂದ್' ಕರೆ ನೀಡಿದ್ದು, ಬೆಳಗ್ಗೆಯಿಂದ ಪುಣೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.

ಪುಣೆ: ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ರಾಜ್ಯದ ಇತರ ಅಪ್ರತಿಮ ನಾಯಕರ ವಿರುದ್ಧದ ಹೇಳಿಕೆಗಳನ್ನು ಖಂಡಿಸಿ ಪ್ರತಿಪಕ್ಷಗಳು ಮಂಗಳವಾರ ಪುಣೆ `ಬಂದ್' ಕರೆ ನೀಡಿದ್ದು, ಬೆಳಗ್ಗೆಯಿಂದ ಪುಣೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.

ಮಹಾರಾಷ್ಟ್ರದ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಈ ಬಂದ್ ಬೆಂಬಲಿಸದಿದ್ದರೂ, ಬಿಜೆಪಿ ರಾಜ್ಯಸಭಾ ಸದಸ್ಯ ಶಿವಾಜಿ ಮಹಾರಾಜರ ವಂಶಸ್ಥ ಉದಯನರಾಜೆ ಭೋಸಲೆ ಅವರು ಪ್ರತಿಪಕ್ಷಗಳು ಆಯೋಜಿಸಿದ್ದ ಮೌನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಬಳಿ ಆರಂಭವಾದ ಮೌನ  ಮೆರವಣಿಗೆ ನಗರದ ಲಾಲ್ ಮಹಲ್‌ನಲ್ಲಿ ಕೊನೆಗೊಳ್ಳಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಶಿವಸೇನಾ ನಾಯಕಿ ಸುಷ್ಮಾ ಅಂಧಾರೆ ಕೂಡ ಭಾಗವಹಿಸಿದ್ದರು.

ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ(ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಸಂಭಾಜಿ ಬ್ರಿಗೇಡ್ ಮತ್ತು ಇತರ ಕೆಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಸಾರ್ವಜನಿಕ ಸಮಾರಂಭದಲ್ಲಿ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಶಿವಾಜಿ ಮಹಾರಾಜರನ್ನು "ಹಳೆಯ ಕಾಲದ ಐಕಾನ್" ಎಂದು ಟೀಕಿಸಿದ್ದು, ಅವರ ವಿವಾದಾತ್ಮಕ ಹೇಳಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ವಿರುದ್ಧ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ನೀಡಿದ್ದ ಹೇಳಿಕೆ ಖಂಡಿಸಿ ಇಂದು ಪುಣೆ ಬಂದ್ ಕರೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT