ಪುಣೆ ಬಂದ್ 
ದೇಶ

ಪುಣೆ ಬಂದ್: ಶಿವಾಜಿ ಮಹಾರಾಜ್, ಇತರರ ವಿರುದ್ಧ ಟೀಕೆ ವಿರೋಧಿಸಿ ಮೌನ ಮೆರವಣಿಗೆ

ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ರಾಜ್ಯದ ಇತರ ಅಪ್ರತಿಮ ನಾಯಕರ ವಿರುದ್ಧದ ಹೇಳಿಕೆಗಳನ್ನು ಖಂಡಿಸಿ ಪ್ರತಿಪಕ್ಷಗಳು ಮಂಗಳವಾರ ಪುಣೆ `ಬಂದ್' ಕರೆ ನೀಡಿದ್ದು, ಬೆಳಗ್ಗೆಯಿಂದ ಪುಣೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.

ಪುಣೆ: ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ರಾಜ್ಯದ ಇತರ ಅಪ್ರತಿಮ ನಾಯಕರ ವಿರುದ್ಧದ ಹೇಳಿಕೆಗಳನ್ನು ಖಂಡಿಸಿ ಪ್ರತಿಪಕ್ಷಗಳು ಮಂಗಳವಾರ ಪುಣೆ `ಬಂದ್' ಕರೆ ನೀಡಿದ್ದು, ಬೆಳಗ್ಗೆಯಿಂದ ಪುಣೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.

ಮಹಾರಾಷ್ಟ್ರದ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಈ ಬಂದ್ ಬೆಂಬಲಿಸದಿದ್ದರೂ, ಬಿಜೆಪಿ ರಾಜ್ಯಸಭಾ ಸದಸ್ಯ ಶಿವಾಜಿ ಮಹಾರಾಜರ ವಂಶಸ್ಥ ಉದಯನರಾಜೆ ಭೋಸಲೆ ಅವರು ಪ್ರತಿಪಕ್ಷಗಳು ಆಯೋಜಿಸಿದ್ದ ಮೌನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಬಳಿ ಆರಂಭವಾದ ಮೌನ  ಮೆರವಣಿಗೆ ನಗರದ ಲಾಲ್ ಮಹಲ್‌ನಲ್ಲಿ ಕೊನೆಗೊಳ್ಳಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಶಿವಸೇನಾ ನಾಯಕಿ ಸುಷ್ಮಾ ಅಂಧಾರೆ ಕೂಡ ಭಾಗವಹಿಸಿದ್ದರು.

ಕಾಂಗ್ರೆಸ್, ಎನ್‌ಸಿಪಿ, ಶಿವಸೇನೆ(ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಸಂಭಾಜಿ ಬ್ರಿಗೇಡ್ ಮತ್ತು ಇತರ ಕೆಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಸಾರ್ವಜನಿಕ ಸಮಾರಂಭದಲ್ಲಿ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಶಿವಾಜಿ ಮಹಾರಾಜರನ್ನು "ಹಳೆಯ ಕಾಲದ ಐಕಾನ್" ಎಂದು ಟೀಕಿಸಿದ್ದು, ಅವರ ವಿವಾದಾತ್ಮಕ ಹೇಳಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ವಿರುದ್ಧ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ನೀಡಿದ್ದ ಹೇಳಿಕೆ ಖಂಡಿಸಿ ಇಂದು ಪುಣೆ ಬಂದ್ ಕರೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT