ಸಾಂದರ್ಭಿಕ ಚಿತ್ರ 
ದೇಶ

ತವಾಂಗ್ ಘರ್ಷಣೆ: ಅರುಣಾಚಲ ಪ್ರದೇಶದಲ್ಲಿ ಭಾರತೀಯ ಯುದ್ಧ ವಿಮಾನಗಳ ಗಸ್ತು ಆರಂಭ

ಚೀನಾದಿಂದ ಭಾರತದ ಗಡಿ ಪ್ರದೇಶದ ಒಳಗೆ ವಾಯುಪ್ರದೇಶದ ಉಲ್ಲಂಘನೆಯಾಗುತ್ತದೆಯೇ ಎಂದು ಪರೀಕ್ಷಿಸಲು ಭಾರತೀಯ ವಾಯುಪಡೆ (IAF) ಅರುಣಾಚಲ ಪ್ರದೇಶದ ಮೇಲೆ ಯುದ್ಧ ಗಸ್ತು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಚೀನಾದಿಂದ ಭಾರತದ ಗಡಿ ಪ್ರದೇಶದ ಒಳಗೆ ವಾಯುಪ್ರದೇಶದ ಉಲ್ಲಂಘನೆಯಾಗುತ್ತದೆಯೇ ಎಂದು ಪರೀಕ್ಷಿಸಲು ಭಾರತೀಯ ವಾಯುಪಡೆ (IAF) ಅರುಣಾಚಲ ಪ್ರದೇಶದ ಮೇಲೆ ಯುದ್ಧ ಗಸ್ತು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅರುಣಾಚಲ ಪ್ರದೇಶದ ತವಾಂಗ್ ನಲ್ಲಿ ಭಾರತ-ಚೀನಾ ಗಡಿ ಸಂಘರ್ಷದ ನಂತರ ಯುದ್ಧ ವಿಮಾನಗಳನ್ನು ಎರಡು ಮೂರು ಬಾರಿ ಗಸ್ತು ತಿರುಗಿಸಲಾಗಿದೆ. ವಾಯುಪಡೆಯು ಅರುಣಾಚಲದಲ್ಲಿ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (LAC) ಯಾದ್ಯಂತ ಚೀನಾದ ವಾಯು ಚಟುವಟಿಕೆಯನ್ನು ಪತ್ತೆಹಚ್ಚಿದೆ.

ಕಳೆದ ವಾರ ಅರುಣಾಚಲ ಪ್ರದೇಶದ ಎಲ್‌ಎಸಿಯಲ್ಲಿ ಭಾರತ ಮತ್ತು ಚೀನಾದ ಸೈನಿಕರು ಘರ್ಷಣೆಗೆ ಒಳಗಾಗಿದ್ದರು. ಮೂಲಗಳ ಪ್ರಕಾರ ಮೊದಲು ಚೀನೀ ಸೈನಿಕರು ಗಡಿಯನ್ನು ದಾಟಿ ಬಂದಿದ್ದಾರೆ. ಇದನ್ನು ಭಾರತೀಯ ಸೈನಿಕರು ದೃಢ ರೀತಿಯಲ್ಲಿ ಎದುರಿಸಿದ್ದಾರೆ. ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎರಡು ಕಡೆಯವರು ತಕ್ಷಣವೇ ಪ್ರದೇಶದಿಂದ ಹೊರಗುಳಿದಿದ್ದಾರೆ. 

ಪೂರ್ವ ಲಡಾಖ್‌ನಲ್ಲಿ ನಡೆದ ಘರ್ಷಣೆಯ ನಂತರ ಭಾರತ ಮತ್ತು ಚೀನಾದ ಸೈನಿಕರ ನಡುವೆ ಇಂತಹ ಘರ್ಷಣೆಗಳು ವರದಿಯಾಗುತ್ತಿರುವುದು ಬಹಳ ಸಮಯದ ನಂತರ ಇದೇ ಮೊದಲು.

2020 ರ ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಘರ್ಷಣೆಯಲ್ಲಿ ದೇಶಕ್ಕಾಗಿ 20 ಭಾರತೀಯ ಸೈನಿಕರು ಹುತಾತ್ಮಗೊಂಡಿದ್ದರು. 40 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು ಮತ್ತು ಗಾಯಗೊಂಡಿದ್ದರು. ಈ ಘಟನೆಯು ಎರಡು ರಾಷ್ಟ್ರಗಳ ನಡುವೆ ಘರ್ಷಣೆಯ ಸರಣಿಯನ್ನು ಹುಟ್ಟುಹಾಕಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT