ಸಾಂದರ್ಭಿಕ ಚಿತ್ರ 
ದೇಶ

ತವಾಂಗ್ ಘರ್ಷಣೆ: ಅರುಣಾಚಲ ಪ್ರದೇಶದಲ್ಲಿ ಭಾರತೀಯ ಯುದ್ಧ ವಿಮಾನಗಳ ಗಸ್ತು ಆರಂಭ

ಚೀನಾದಿಂದ ಭಾರತದ ಗಡಿ ಪ್ರದೇಶದ ಒಳಗೆ ವಾಯುಪ್ರದೇಶದ ಉಲ್ಲಂಘನೆಯಾಗುತ್ತದೆಯೇ ಎಂದು ಪರೀಕ್ಷಿಸಲು ಭಾರತೀಯ ವಾಯುಪಡೆ (IAF) ಅರುಣಾಚಲ ಪ್ರದೇಶದ ಮೇಲೆ ಯುದ್ಧ ಗಸ್ತು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಚೀನಾದಿಂದ ಭಾರತದ ಗಡಿ ಪ್ರದೇಶದ ಒಳಗೆ ವಾಯುಪ್ರದೇಶದ ಉಲ್ಲಂಘನೆಯಾಗುತ್ತದೆಯೇ ಎಂದು ಪರೀಕ್ಷಿಸಲು ಭಾರತೀಯ ವಾಯುಪಡೆ (IAF) ಅರುಣಾಚಲ ಪ್ರದೇಶದ ಮೇಲೆ ಯುದ್ಧ ಗಸ್ತು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅರುಣಾಚಲ ಪ್ರದೇಶದ ತವಾಂಗ್ ನಲ್ಲಿ ಭಾರತ-ಚೀನಾ ಗಡಿ ಸಂಘರ್ಷದ ನಂತರ ಯುದ್ಧ ವಿಮಾನಗಳನ್ನು ಎರಡು ಮೂರು ಬಾರಿ ಗಸ್ತು ತಿರುಗಿಸಲಾಗಿದೆ. ವಾಯುಪಡೆಯು ಅರುಣಾಚಲದಲ್ಲಿ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (LAC) ಯಾದ್ಯಂತ ಚೀನಾದ ವಾಯು ಚಟುವಟಿಕೆಯನ್ನು ಪತ್ತೆಹಚ್ಚಿದೆ.

ಕಳೆದ ವಾರ ಅರುಣಾಚಲ ಪ್ರದೇಶದ ಎಲ್‌ಎಸಿಯಲ್ಲಿ ಭಾರತ ಮತ್ತು ಚೀನಾದ ಸೈನಿಕರು ಘರ್ಷಣೆಗೆ ಒಳಗಾಗಿದ್ದರು. ಮೂಲಗಳ ಪ್ರಕಾರ ಮೊದಲು ಚೀನೀ ಸೈನಿಕರು ಗಡಿಯನ್ನು ದಾಟಿ ಬಂದಿದ್ದಾರೆ. ಇದನ್ನು ಭಾರತೀಯ ಸೈನಿಕರು ದೃಢ ರೀತಿಯಲ್ಲಿ ಎದುರಿಸಿದ್ದಾರೆ. ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎರಡು ಕಡೆಯವರು ತಕ್ಷಣವೇ ಪ್ರದೇಶದಿಂದ ಹೊರಗುಳಿದಿದ್ದಾರೆ. 

ಪೂರ್ವ ಲಡಾಖ್‌ನಲ್ಲಿ ನಡೆದ ಘರ್ಷಣೆಯ ನಂತರ ಭಾರತ ಮತ್ತು ಚೀನಾದ ಸೈನಿಕರ ನಡುವೆ ಇಂತಹ ಘರ್ಷಣೆಗಳು ವರದಿಯಾಗುತ್ತಿರುವುದು ಬಹಳ ಸಮಯದ ನಂತರ ಇದೇ ಮೊದಲು.

2020 ರ ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಘರ್ಷಣೆಯಲ್ಲಿ ದೇಶಕ್ಕಾಗಿ 20 ಭಾರತೀಯ ಸೈನಿಕರು ಹುತಾತ್ಮಗೊಂಡಿದ್ದರು. 40 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು ಮತ್ತು ಗಾಯಗೊಂಡಿದ್ದರು. ಈ ಘಟನೆಯು ಎರಡು ರಾಷ್ಟ್ರಗಳ ನಡುವೆ ಘರ್ಷಣೆಯ ಸರಣಿಯನ್ನು ಹುಟ್ಟುಹಾಕಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ವಿಮಾನಗಳಲ್ಲಿ ವ್ಯತ್ಯಯ: ಇತರೆ ಏರ್‌ಲೈನ್‌ಗಳಿಂದ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್

Love jihad case: 'ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್': ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ! Video

'ಹೆಣ್ಣುಮಕ್ಕಳ ತಂಟೆಗೆ ಬಂದ್ರೆ.. ಯಮರಾಜ ಕಾಯುತ್ತಿರುತ್ತಾನೆ': ಸಿಎಂ ಯೋಗಿ ಆದಿತ್ಯಾನಾಥ್ ಎನ್ಕೌಂಟರ್ ಎಚ್ಚರಿಕೆ!

ಇಂಡಿಗೋ ವಿಮಾನಗಳ ರದ್ದು: ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರಿಗಾಗಿ ವಿಶೇಷ ರೈಲುಗಳ ಸಂಚಾರ ಆರಂಭಿಸಿದ ನೈರುತ್ಯ ರೈಲ್ವೆ!

ಅಧಿಕಾರ ಹಂಚಿಕೆ ಮಾಡಿಕೊಳ್ಳಲು ಇದೇನು ವ್ಯವಹಾರನಾ? CM ಬದಲಾವಣೆ ಮುಗಿದ ಅಧ್ಯಾಯ

SCROLL FOR NEXT