ನವದೆಹಲಿ ವಿಮಾನ ನಿಲ್ದಾಣದ 3 ನೇ ಟರ್ಮಿನಲ್ 
ದೇಶ

ವಿಮಾನ ನಿಲ್ದಾಣಗಳಲ್ಲಿ ದಟ್ಟಣೆ ನಿರ್ವಹಣೆಗೆ ಸಿಐಎಸ್ಎಫ್ ನಿಂದ ಹೆಚ್ಚುವರಿ 100 ಸಿಬ್ಬಂದಿ ನಿಯೋಜನೆ

ದೆಹಲಿ, ಮುಂಬೈ ಸೇರಿದಂತೆ ದೇಶದ ದೊಡ್ಡ ವಿಮಾನ ನಿಲ್ದಾಣಗಳಲ್ಲಿ ದಟ್ಟಣೆಯನ್ನು ನಿವಾರಿಸುವುದಕ್ಕಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ( ಸಿಐಎಸ್ಎಫ್) ಸಜ್ಜುಗೊಂಡಿದೆ.

ನವದೆಹಲಿ: ದೆಹಲಿ, ಮುಂಬೈ ಸೇರಿದಂತೆ ದೇಶದ ದೊಡ್ಡ ವಿಮಾನ ನಿಲ್ದಾಣಗಳಲ್ಲಿ ದಟ್ಟಣೆಯನ್ನು ನಿವಾರಿಸುವುದಕ್ಕಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ( ಸಿಐಎಸ್ಎಫ್) ಸಜ್ಜುಗೊಂಡಿದೆ.

ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಹೆಚ್ಚುವರಿ ಭದ್ರತಾ ಕೌಂಟರ್ ಗಳು ಪ್ರಾರಂಭವಾಗಲಿದ್ದು, ಸಿಐಎಸ್ಎಫ್ 100 ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಿದೆ.
 
ಕೇಂದ್ರ ಅರೆಸೇನಾಪಡೆಯನ್ನು ರಾಷ್ಟ್ರೀಯ ವಾಯುಯಾನ ಭದ್ರತಾ ಪಡೆ ಎಂದು ಗುರುತಿಸಲಾಗಿದ್ದು, ಭದ್ರತಾ ಶಿಷ್ಟಾಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ತಾನು ಇನ್ನಷ್ಟು ಸಿಬ್ಬಂದಿಗಳನ್ನು ನಿಯೋಜಿಸಬಹುದಾಗಿದೆ ಎಂದು ವಿಮಾನ ನಿಲ್ದಾಣ ನಿರ್ವಾಹಕರು, ವಿಮಾನಯಾನ ಸಂಸ್ಥೆಗಳು ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮಾಹಿತಿ ನೀಡಿದೆ.

"ಹಿರಿಯ ಸಿಐಎಸ್ಎಫ್ ಅಧಿಕಾರಿ ಪಿಟಿಐ ಗೆ ಮಾಹಿತಿ ನೀಡಿದ್ದು, 100 ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗುತ್ತಿದೆ. ದೆಹಲಿ ಹಾಗೂ ಮುಂಬೈ ವಿಮಾನ ನಿಲ್ದಾಣಗಳಲ್ಲಿ ತಲಾ 4,500 ಸಿಬ್ಬಂದಿಗಳ ನೇಮಕಕ್ಕೆ ಅವಕಾಶವಿದೆ. ಇಷ್ಟೇ ಪ್ರಮಾಣದ ಸಿಬ್ಬಂದಿಗಳನ್ನು ಹೆಚ್ಚು ದಟ್ಟಣೆ ಎದುರಿಸುತ್ತಿರುವ ವಿಮಾನ ನಿಲ್ದಾಣಗಳಲ್ಲೂ ನಿಯೋಜಿಸುವುದಕ್ಕೆ ಅವಕಾಶವಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ, ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ

“Tuesday, 8:00 P.M. Eastern Time"!: ಇರಾನ್'ಗೆ ಮತ್ತೊಂದು ಎಚ್ಚರಿಕೆ ಕೊಟ್ಟ ಟ್ರಂಪ್, ಸರ್ವನಾಶದ ಸುಳಿವು..!

​ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿ

ಡಿಲಿಮಿಟೇಶನ್ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಧ್ವನಿ ಕುಗ್ಗಿಸುವ ಯತ್ನ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

SCROLL FOR NEXT