ನವದೆಹಲಿ ವಿಮಾನ ನಿಲ್ದಾಣದ 3 ನೇ ಟರ್ಮಿನಲ್ 
ದೇಶ

ವಿಮಾನ ನಿಲ್ದಾಣಗಳಲ್ಲಿ ದಟ್ಟಣೆ ನಿರ್ವಹಣೆಗೆ ಸಿಐಎಸ್ಎಫ್ ನಿಂದ ಹೆಚ್ಚುವರಿ 100 ಸಿಬ್ಬಂದಿ ನಿಯೋಜನೆ

ದೆಹಲಿ, ಮುಂಬೈ ಸೇರಿದಂತೆ ದೇಶದ ದೊಡ್ಡ ವಿಮಾನ ನಿಲ್ದಾಣಗಳಲ್ಲಿ ದಟ್ಟಣೆಯನ್ನು ನಿವಾರಿಸುವುದಕ್ಕಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ( ಸಿಐಎಸ್ಎಫ್) ಸಜ್ಜುಗೊಂಡಿದೆ.

ನವದೆಹಲಿ: ದೆಹಲಿ, ಮುಂಬೈ ಸೇರಿದಂತೆ ದೇಶದ ದೊಡ್ಡ ವಿಮಾನ ನಿಲ್ದಾಣಗಳಲ್ಲಿ ದಟ್ಟಣೆಯನ್ನು ನಿವಾರಿಸುವುದಕ್ಕಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ( ಸಿಐಎಸ್ಎಫ್) ಸಜ್ಜುಗೊಂಡಿದೆ.

ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಹೆಚ್ಚುವರಿ ಭದ್ರತಾ ಕೌಂಟರ್ ಗಳು ಪ್ರಾರಂಭವಾಗಲಿದ್ದು, ಸಿಐಎಸ್ಎಫ್ 100 ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಿದೆ.
 
ಕೇಂದ್ರ ಅರೆಸೇನಾಪಡೆಯನ್ನು ರಾಷ್ಟ್ರೀಯ ವಾಯುಯಾನ ಭದ್ರತಾ ಪಡೆ ಎಂದು ಗುರುತಿಸಲಾಗಿದ್ದು, ಭದ್ರತಾ ಶಿಷ್ಟಾಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ತಾನು ಇನ್ನಷ್ಟು ಸಿಬ್ಬಂದಿಗಳನ್ನು ನಿಯೋಜಿಸಬಹುದಾಗಿದೆ ಎಂದು ವಿಮಾನ ನಿಲ್ದಾಣ ನಿರ್ವಾಹಕರು, ವಿಮಾನಯಾನ ಸಂಸ್ಥೆಗಳು ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮಾಹಿತಿ ನೀಡಿದೆ.

"ಹಿರಿಯ ಸಿಐಎಸ್ಎಫ್ ಅಧಿಕಾರಿ ಪಿಟಿಐ ಗೆ ಮಾಹಿತಿ ನೀಡಿದ್ದು, 100 ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗುತ್ತಿದೆ. ದೆಹಲಿ ಹಾಗೂ ಮುಂಬೈ ವಿಮಾನ ನಿಲ್ದಾಣಗಳಲ್ಲಿ ತಲಾ 4,500 ಸಿಬ್ಬಂದಿಗಳ ನೇಮಕಕ್ಕೆ ಅವಕಾಶವಿದೆ. ಇಷ್ಟೇ ಪ್ರಮಾಣದ ಸಿಬ್ಬಂದಿಗಳನ್ನು ಹೆಚ್ಚು ದಟ್ಟಣೆ ಎದುರಿಸುತ್ತಿರುವ ವಿಮಾನ ನಿಲ್ದಾಣಗಳಲ್ಲೂ ನಿಯೋಜಿಸುವುದಕ್ಕೆ ಅವಕಾಶವಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT