ಅರ್ನಬ್ ಗೋಸ್ವಾಮಿ 
ದೇಶ

ಪತ್ರಕರ್ತ ಅರ್ನಬ್ ವಿರುದ್ಧದ ಪ್ರಕರಣ ಹಿಂಪಡೆದ ಪರಮ್ ಬಿರ್ ಸಿಂಗ್

ಮುಂಬೈ ನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ಎಆರ್ ಜಿ ಮೀಡಿಯಾದ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಹಿಂಪಡೆದಿದ್ದಾರೆ. 

ಮುಂಬೈ: ಮುಂಬೈ ನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ಎಆರ್ ಜಿ ಮೀಡಿಯಾದ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಹಿಂಪಡೆದಿದ್ದಾರೆ. 

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಡಿ ಕೇದಾರ್ ಮೊಕದ್ದಮೆಯನ್ನು ಹಿಂಪಡೆಯಲು ಅನುಮತಿ ನೀಡಿದ್ದು, 1,500 ರೂಪಾಯಿಗಳ ನಾಮಮಾತ್ರ ವೆಚ್ಚವನ್ನು ಗೋಸ್ವಾಮಿಗೆ ನೀಡಿ ಪ್ರಕರಣ ಹಿಂಪಡೆಯಲು ಸಿಂಗ್ ಗೆ ಸೂಚನೆ ನೀಡಿದ್ದಾರೆ.

ಮಾನನಷ್ಟ ಮೊಕದ್ದಮೆ ಹಾಕಿದರೆ, ಸಮರ್ಥನೆ ನೀಡುವವರು ಅಡ್ವೊಕೇಟ್ ನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಆದ್ದರಿಂದ ಬೇಷರತ್ ಆಗಿ ಮೊಕದ್ದಮೆ ಹಿಂಪಡೆದರೂ ಅದಕ್ಕೆ ವೆಚ್ಚಗಳನ್ನು ವಿಧಿಸಲೇಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
 
2021 ರಲ್ಲಿ ಗೋಸ್ವಾಮಿ ಹಾಗೂ ರಿಪಬ್ಲಿಕ್ ಚಾನಲ್ ವಿರುದ್ಧ ಪರಮ್ ಬಿರ್ ಸಿಂಗ್ 90,00,000 ರೂಪಾಯಿಗಳ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT