ನಿತೀಶ್ ಕುಮಾ 
ದೇಶ

ನೀನು ಕುಡುಕ: ಪ್ರತಿಭಟನೆಗಿಳಿದ ಬಿಜೆಪಿ ಶಾಸಕನ ವಿರುದ್ಧ ತಾಳ್ಮೆ ಕಳೆದುಕೊಂಡು ಕೂಗಾಡಿದ ಸಿಎಂ ನಿತೀಶ್ ಕುಮಾರ್!

ನಕಲಿ ಮದ್ಯ ಸೇವಿಸಿ ಬಿಹಾರದ ಸರನ್ ಜಿಲ್ಲೆಯ ಛಪ್ರಾ ಪ್ರದೇಶದಲ್ಲಿ ಐವರು ಮೃತಪಟ್ಟಿದ್ದು, ಈ ಘಟನೆ ಸಂಬಂಧ ಬುಧವಾರ ಬಿಹಾರ ವಿಧಾನಸಭೆಯಲ್ಲಿ ಗದ್ದಲವುಂಟಾಗಿತ್ತು.

ಸರನ್ (ಬಿಹಾರ): ನಕಲಿ ಮದ್ಯ ಸೇವಿಸಿ ಬಿಹಾರದ ಸರನ್ ಜಿಲ್ಲೆಯ ಛಪ್ರಾ ಪ್ರದೇಶದಲ್ಲಿ ಐವರು ಮೃತಪಟ್ಟಿದ್ದು, ಈ ಘಟನೆ ಸಂಬಂಧ ಬುಧವಾರ ಬಿಹಾರ ವಿಧಾನಸಭೆಯಲ್ಲಿ ಗದ್ದಲವುಂಟಾಗಿತ್ತು.

ಘಟನೆ ಸಂಬಂಧ ಬಿಜೆಪಿ ನಾಯಕರು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ಇದೇ ವೇಳೆ ಸದನದ ಬಾವಿಗಿಳಿದು ಪ್ರತಿಭಟನೆಯನ್ನೂ ನಡೆಸಿದರು.

ಸರ್ಕಾರ ಮದ್ಯಪಾನ ನಿಷೇಧವನ್ನು ಜಾರಿಗೆ ತಂದಾಗ ನಾವು ಅದನ್ನು ಬೆಂಬಲಿಸಿದೆವು. ಆದರೆ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ಹೇಳಿದರು.

ಇದೇ ವೇಳೆ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರು 2016ರ ಮದ್ಯ ನಿಷೇಧ ನೀತಿ ಕುರಿತು ಪ್ರಶ್ನೆ ಎತ್ತಿದರು.

ಈ ವೇಳೆ ತಾಳ್ಮೆ ಕಳೆದುಕೊಂಡ ನಿತೀಶ್ ಕುಮಾರ್ ಬಿಜೆಪಿ ಶಾಸಕರ ವಿರುದ್ಧ ಕೂಗಾಡಿದರು. ನೀನು ಕುಡಕ ಎಂದು ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT