ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ 
ದೇಶ

'ಭಾರತ್ ಜೋಡೋ ಯಾತ್ರೆಗೆ 100 ದಿನ: ರಾಹುಲ್ ಸಾಧಿಸಿದಾದರೂ ಏನು?

ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ಇಂದು 100ನೇ ದಿನಕ್ಕೆ ಕಾಲಿಟ್ಟಿರುವಂತೆಯೇ, 2024ರ ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಪಕ್ಷ ಕೆಲವೊಂದು ಉತ್ತರಗಳನ್ನು ಕಂಡುಕೊಂಡಿದೆ ಎಂದು ಪಕ್ಷದ ವೀಕ್ಷಕರು ಭಾವಿಸಿದ್ದಾರೆ ಆದರೆ,  ಇದು ಮುಂದೆ ಚುನಾವಣೆಗೆ ಲಾಭವಾಗಬಹುದೇ ಎಂಬ ಪ್ರಶ್ನೆಗಳು ಕಾಡುತ್ತಿವೆ.

ನವದೆಹಲಿ: ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ಇಂದು 100ನೇ ದಿನಕ್ಕೆ ಕಾಲಿಟ್ಟಿರುವಂತೆಯೇ, 2024ರ ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಪಕ್ಷ ಕೆಲವೊಂದು ಉತ್ತರಗಳನ್ನು ಕಂಡುಕೊಂಡಿದೆ ಎಂದು ಪಕ್ಷದ ವೀಕ್ಷಕರು ಭಾವಿಸಿದ್ದಾರೆ ಆದರೆ, ಇದು ಮುಂದೆ ಚುನಾವಣೆಗೆ ಲಾಭವಾಗಬಹುದೇ ಎಂಬ ಪ್ರಶ್ನೆಗಳು ಕಾಡುತ್ತಿವೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುತ್ತಿರುವ ಯಾತ್ರೆ  ಕಳೆದ ಮೂರು ತಿಂಗಳಲ್ಲಿ ಹಲವು ವಿವಾದಗಳನ್ನು ಹುಟ್ಟುಹಾಕಿದೆ ಮತ್ತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ. 

2, 800 ಕಿ.ಮೀ ವ್ಯಾಪ್ತಿಯಲ್ಲಿ ಬೆಂಬಲಿಗರು ಮತ್ತು ವಿರೋಧಿಗಳ ಗಮನ ಸೆಳೆಯುವಲ್ಲಿ ರಾಹುಲ್ ಯಶಸ್ವಿಯಾಗಿದ್ದಾರೆ.ಸೆಲೆಬ್ರಿಟಿಗಳು, ಅಕಾಡೆಮಿಕ್ ತಜ್ಞರು ಸೇರಿದಂತೆ  ಕೆಲ ಪ್ರಸಿದ್ಧ ವ್ಯಕ್ತಿಗಳು ಕೂಡಾ ರಾಹುಲ್ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಆದಾಗ್ಯೂ, ಯಾತ್ರೆಗೆ ಹೆಚ್ಚು ಸ್ಪಷ್ಟವಾದ ರಾಜಕೀಯ ಉದ್ದೇಶ ಇರಬೇಕು ಎಂದು ಕೆಲವು ರಾಜಕೀಯ ಪಂಡಿತರು ಹೇಳುತ್ತಾರೆ. ಅಲ್ಲದೇ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ  ಯಾತ್ರೆ ಸಾಗದಿರುವುದನ್ನು ಪ್ರಶ್ನಿಸಿದ್ದಾರೆ.

ಯಾತ್ರೆಯಿಂದ ಚುನಾವಣೆಯಲ್ಲಿ ಏನಾದರೂ ಲಾಭವಾಗುತ್ತಿದೆಯೇ ಎಂಬ ಪ್ರಶ್ನೆಗಳ ನಡುವೆ ಇತ್ತೀಚಿಗೆ ಮುಕ್ತಾಯಗೊಂಡ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ  ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಗೆದ್ದರೆ, ಗುಜರಾತ್ ನಲ್ಲಿ ತೀವ್ರ ಕಳಪೆ ಫಲಿತಾಂಶ ಪಡೆದಿದೆ. ಮುಂದಿನ ವರ್ಷ ನಡೆಯಲಿರುವ ಕರ್ನಾಟಕ, ಮಧ್ಯ ಪ್ರದೇಶ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಯಾತ್ರೆ ಬೀರಿರುವ ಸ್ಪಷ್ಟ ಪರಿಣಾಮ ತಿಳಿದುಬರಲಿದೆ. 

ಭಾರತ್ ಜೋಡೋ ಯಾತ್ರೆ ಮುಂದೆ ಕಾಂಗ್ರೆಸ್ ಪಕ್ಷಕ್ಕೆ 'ಗೇಮ್  ಚೇಂಜರ್' ಆಗಬಹುದು ಎಂದು ಮಾಜಿ ಕಾಂಗ್ರೆಸ್ ಮುಖಂಡ ಸಂಜಯ್ ಜಾ ಹೇಳುತ್ತಾರೆ.  ಈ ಯಾತ್ರೆ  ರಾಹುಲ್ ಗಾಂಧಿಯ ರಾಜಕೀಯ ಬ್ರ್ಯಾಂಡ್ ನ್ನು ಪುನರುಜ್ಜೀವನಗೊಳಿಸಿದೆ. 
ಇದರಿಂದಾಗಿ ಬಿಜೆಪಿ  'ನಕಲಿ ಸುದ್ದಿ, ದುರುದ್ದೇಶಪೂರಿತ ಪ್ರಚಾರದಿಂದ  ಮುಂದೆ ರಾಹುಲ್ ಗಾಂಧಿಯನ್ನು ಅಪಹಾಸ್ಯ ಮಾಡುವಂತಿಲ್ಲ. ಎರಡನೆಯದಾಗಿ, ಕಾಂಗ್ರೆಸ್ ಅಂತಿಮವಾಗಿ ಈ ಜನಾಂದೋಲನದ ಮೂಲಕ ಜನರೊಂದಿಗೆ ನೇರವಾಗಿ ಸಂಪರ್ಕ ಹೊಂದಿದೆ  ಎಂದು ಅವರು ಹೇಳಿದರು.

ಯಾತ್ರೆ ಖಂಡಿತವಾಗಿಯೂ ಪಕ್ಷದ ತಳಮಟ್ಟದವರೆಗೂ  ತಲುಪಲಿದೆ ಎಂದು ಹೇಳುವ ಜಾ, ಹಿಮಾಚಲ ಪ್ರದೇಶದ ಫಲಿತಾಂಶ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆಲ್ಲಬಹುದು ಎಂಬುದನ್ನು ತೋರಿಸಿದೆ. ಖಂಡಿತವಾಗಿಯೂ ಮುಂದಿನ ವರ್ಷ ನಡೆಯಲಿರುವ ಕರ್ನಾಟಕ, ರಾಜಸ್ಥಾನ, ಛತ್ತೀಸ್ ಗಢ, ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ಭಾರತ್ ಜೋಡೋ ಯಾತ್ರೆ ಪರಿಣಾಮ ಬೀರಲಿದೆ ಎಂದು ಸಂಜಯ್ ಜಾ ಹೇಳಿದರು.

ಯಾತ್ರೆಯು ಜನರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ್ದರೂ ಚುನಾವಣೆ ಪರಿಣಾಮ ಅದರ ನೈಜ ಪರೀಕ್ಷೆಯಾಗಲಿದೆ ಎಂದು ರಾಜಕೀಯ ತಜ್ಞರಾದ ಸಂಜಯ್ ಪಾಂಡೆ, ಸುಶೀಲಾ ರಾಮಸ್ವಾಮಿ ಸೇರಿದಂತೆ ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT