ಬಂಗಾಳದಲ್ಲಿ ಕಾಲ್ತುಳಿತ 
ದೇಶ

ಬಂಗಾಳದಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ: 3 ಸಾವು 

ಬಂಗಾಳದಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ ಉಂಟಾಗಿ 3 ಮಂದಿ ಸಾವನ್ನಪ್ಪಿದ್ದಾರೆ. 

ಕೋಲ್ಕತ್ತ: ಬಂಗಾಳದಲ್ಲಿ ಬ್ಲಾಂಕೆಟ್ ವಿತರಣೆ ವೇಳೆ ಕಾಲ್ತುಳಿತ ಉಂಟಾಗಿ 3 ಮಂದಿ ಸಾವನ್ನಪ್ಪಿದ್ದಾರೆ. 

ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,  ವಿಪಕ್ಷ ನಾಯಕ ಸುವೇಂದು ಅಧಿಕಾರಿ ಬ್ಲಾಂಕೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುವೇಂದು ಅಧಿಕಾರಿ ಸ್ಥಳದಿಂದ ತೆರಳುತ್ತಿದ್ದಂತೆಯೇ ಜನರು ವೇದಿಕೆಯತ್ತ ಧಾವಿಸಿದ ಪರಿಣಾಮ ಕಾಲ್ತುಳಿತ ಉಂಟಾಗಿದೆ.
 
ಸುವೇಂದು ಅಧಿಕಾರಿ ಈ ಘಟನೆಯನ್ನು ದುರದೃಷ್ಟಕರ ಎಂದು ಹೇಳಿದ್ದು, ಆಡಳಿತಾರೂಢ ಪಕ್ಷ ಟಿಎಂಸಿ ಸುವೇಂದು ಅಧಿಕಾರಿ ಸೃಷ್ಟಿಸಿದ ಅವ್ಯವಸ್ಥೆಯೇ ಈ ಘಟನೆಗೆ ಕಾರಣ ಎಂದು ಹೇಳಿದೆ. ಕಾರ್ಯಕ್ರಮದಲ್ಲಿ 5,000 ಮಂದಿ ಇದ್ದರು ಎಂದು ಟಿಎಂಸಿ ನಾಯಕ ಅಸಾನ್ಸೋಲ್ ಮೇಯರ್ ಬಿಧನ್ ಉಪಾಧ್ಯಾಯ ಹೇಳಿದ್ದಾರೆ. 

ಕಾಲ್ತುಳಿತದಲ್ಲಿ 5 ಮಂದಿ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT