ಉದ್ಧವ್ ಠಾಕ್ರೆ 
ದೇಶ

ಗಡಿ ವಿವಾದ: ದೆಹಲಿಯಲ್ಲಿ ನಡೆದ ಸಿಎಂಗಳ ಸಭೆ ಏನನ್ನೂ ಸಾಧಿಸಿಲ್ಲ; ಕರ್ನಾಟಕದ ಪರವಾಗಿದೆ ಎಂದ ಉದ್ಧವ್

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯಿಂದ ಏನನ್ನೂ ಸಾಧಿಸಿಲ್ಲ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಗುರುವಾರ ಹೇಳಿದ್ದಾರೆ.

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯಿಂದ ಏನನ್ನೂ ಸಾಧಿಸಿಲ್ಲ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಗುರುವಾರ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಡಿದ ಕೆಲವು ಪೋಸ್ಟ್ ಗಳನ್ನು ಅವರು ಮಾಡಿಲ್ಲ ಎಂದು ನಂಬುವುದು ಕಷ್ಟ ಎಂದಿದ್ದಾರೆ.

"ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯಿಂದ ಏನು ಸಾಧಿಸಲಾಗಿದೆ? ಇದು ನಮ್ಮ ಗಾಯಗಳಿಗೆ ಉಪ್ಪು ಸವರಿದೆ. ಎಂದಿನಂತೆ, ಚರ್ಚೆಗಳು ಕರ್ನಾಟಕದ ಪರವಾಗಿವೆ" ಎಂದು ಠಾಕ್ರೆ ಹೇಳಿದ್ದಾರೆ.

ಕರ್ನಾಟಕವು ಬೆಳಗಾವಿಯಲ್ಲಿ(ಉತ್ತರ ಕರ್ನಾಟಕದ ಎರಡು ರಾಜ್ಯಗಳ ನಡುವಿನ ವಿವಾದದ ಪ್ರಮುಖ ಭಾಗವಾಗಿರುವ ನಗರ) ವಿಧಾನಸಭೆಯ ಅಧಿವೇಶನ ಏಕೆ ನಡೆಸುತ್ತದೆ? ಗಡಿ ವಿವಾದವು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ಎರಡನೇ ರಾಜಧಾನಿಯ ಸ್ಥಾನಮಾನವನ್ನು ಏಕೆ ನೀಡಿತು? ಎಂಬುದನ್ನು ತಿಳಿಸಬೇಕು ಎಂದು ಮಹಾರಾಷ್ಟ್ರ ಮಾಜಿ ಸಿಎಂ ಒತ್ತಾಯಿಸಿದ್ದಾರೆ.

''ಬೆಳಗಾವಿ, ಕಾರವಾರ, ನಿಪ್ಪಾಣಿ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳು(ಉತ್ತರ ಕರ್ನಾಟಕದ) ಮಹಾರಾಷ್ಟ್ರಕ್ಕೆ ಸೇರಲು ಬಯಸುತ್ತವೆ. ಈ ಬೇಡಿಕೆಗೆ ಏಕೆ ಉತ್ತರವಿಲ್ಲ’’ ಎಂದು ಠಾಕ್ರೆ ಪ್ರಶ್ನಿಸಿದರು.

ಕೆಲವು 'ನಕಲಿ' ಟ್ವಿಟರ್ ಹ್ಯಾಂಡಲ್‌ಗಳು ತಮ್ಮ ಹೆಸರಿನಲ್ಲಿ ಉದ್ವಿಗ್ನತೆ ಹೆಚ್ಚಿಸುವ ಟ್ವೀಟ್‌ಗಳನ್ನು ಪೋಸ್ಟ್ ಮಾಡುತ್ತಿವೆ ಎಂದು ಹೇಳಲು ಕರ್ನಾಟಕದ ಮುಖ್ಯಮಂತ್ರಿ ದೆಹಲಿಯಲ್ಲಿ ಬುಧವಾರದ ನಡೆದ ಸಭೆಯವರೆಗೂ ಏಕೆ ಕಾಯುತ್ತಿದ್ದರು ಎಂದು ಠಾಕ್ರೆ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT