ದೇಶ

ದೇಶದಲ್ಲಿ ಕೋಟ್ಯಂತರ ಜನ ಕುಡಿಯುತ್ತಾರೆ, ಅವರು ಸಾಯಬೇಕೇ?: ನಿತೀಶ್ ಕುಮಾರ್‌ಗೆ ಸುಶೀಲ್ ಮೋದಿ ಪ್ರಶ್ನೆ

Lingaraj Badiger

ನವದೆಹಲಿ: ದೇಶದಲ್ಲಿ ಕೋಟ್ಯಂತರ ಜನ ಮದ್ಯ ಸೇವಿಸುತ್ತಾರೆ, ಅವರೆಲ್ಲರೂ ಸಾಯಬೇಕೇ? ಎಂದು ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಗುರುವಾರ ಪ್ರಶ್ನಿಸಿದ್ದಾರೆ.

ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು "ಜೋ ಪಿಯೇಗಾ, ವೋ ಮರೇಗಾ"(ಯಾರು ಕುಡಿಯುತ್ತಾರೋ ಅವರು ಸಾಯುತ್ತಾರೆ) ಎಂದು ಹೇಳಿದ್ದರು.

ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಮೋದಿ, ಮದ್ಯಪಾನ ಮಾಡುವವರು "ಮಹಾಪಾಪಿ"(ದೊಡ್ಡ ಪಾಪಿಗಳು) ಮತ್ತು ಅವರು ಭಾರತೀಯರಾಗಲು ಸಾಧ್ಯವಿಲ್ಲ ಎಂದು ಈ ಹಿಂದೆಯೂ ನಿತೀಶ್ ಕುಮಾರ್ ಹೇಳಿದ್ದರು. ಈಗ ಮದ್ಯ ನಿಷೇಧ ಜಾರಿಯಲ್ಲಿರುವ ಬಿಹಾರದಲ್ಲಿ ನಕಲಿ ಮದ್ಯ ಸೇವನೆಯಿಂದ ಜನರು ಸಾಯುತ್ತಿರುವಾಗ ಮುಖ್ಯಮಂತ್ರಿಗಳ ಇಂತಹ ಹೇಳಿಕೆ ಅನುಚಿತ ಎಂದಿದ್ದಾರೆ.

ಬಿಹಾರದಲ್ಲಿ ಅಕ್ರಮ ಮದ್ಯ ವ್ಯಾಪಾರವು "ಸಮಾನಾಂತರ ಆರ್ಥಿಕತೆ"ಯಾಗಿ ಮಾರ್ಪಟ್ಟಿದೆ ಎಂದು ಬಿಹಾರ ಮಾಜಿ ಉಪ ಮುಖ್ಯಮಂತ್ರಿ ಆರೋಪಿಸಿದ್ದಾರೆ.

SCROLL FOR NEXT