ನಿತೀಶ್ ಕುಮಾ 
ದೇಶ

ನೀನು ಕುಡಿದರೆ ನೀನೇ ಸಾಯುತ್ತೀಯಾ: ನಕಲಿ ಮದ್ಯ ದುರಂತಕ್ಕೆ ಬಿಹಾರ ಸಿಎಂ ಬೇಸರ

ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ನೀನು ನಕಲಿ ಮದ್ಯ ಸೇವಿಸಿದರೆ ನೀನೇ ಸಾಯುತ್ತೀಯಾ" ಎಂದು ಹೇಳಿದ್ದಾರೆ.

ಓಟ್ನಾ: ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ನೀನು ನಕಲಿ ಮದ್ಯ ಸೇವಿಸಿದರೆ ನೀನೇ ಸಾಯುತ್ತೀಯಾ" ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮದ್ಯ ನಿಷೇಧವನ್ನು ಸಮರ್ಥಿಸಿಕೊಂಡ ನಿತೀಶ್ ಕುಮಾರ್, ರಾಜ್ಯದಲ್ಲಿ ಮದ್ಯ ನಿಷೇಧ ನೀತಿಯಿಂದ ಹಲವು ಜನರಿಗೆ ಪ್ರಯೋಜನವಾಗಿದೆ. ತಮ್ಮ ಕ್ರಮದಿಂದ ಹೆಚ್ಚು ಜನ ಮದ್ಯಪಾನವನ್ನು ತ್ಯಜಿಸಿದ್ದಾರೆ ಎಂದು ಹೇಳಿದರು.

"ಮದ್ಯ ನಿಷೇಧದಿಂದ ಹಲವಾರು ಜನರಿಗೆ ಲಾಭವಾಗಿದೆ. ಹೆಚ್ಚಿನ ಸಂಖ್ಯೆಯ ಜನರು ಮದ್ಯವನ್ನು ತ್ಯಜಿಸಿದ್ದಾರೆ... ಇದು ಒಳ್ಳೆಯದು. ಹಲವಾರು ಜನ ಇದನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಆದರೆ ಕೆಲವರು ಮಾತ್ರ ತೊಂದರೆ ಕೊಡುತ್ತಿದ್ದಾರೆ. ಅಂತವರನ್ನು ಗುರುತಿಸಿ ಬಂಧಿಸುವಂತೆ ನಾನು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ನಿತೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಮದ್ಯೆ ಸೇವಿಸುವ ಬಡವರನ್ನು ಬಂಧಿಸಬೇಡಿ ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ. ಆದರೆ ಮದ್ಯವನ್ನು ತಯಾರಿಸುವ ಮತ್ತು ಮದ್ಯದ ವ್ಯಾಪಾರವನ್ನು ನಡೆಸುವ ಜನರನ್ನು ಬಂಧಿಸಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT