ನಿತೀಶ್ ಕುಮಾ 
ದೇಶ

ನೀನು ಕುಡಿದರೆ ನೀನೇ ಸಾಯುತ್ತೀಯಾ: ನಕಲಿ ಮದ್ಯ ದುರಂತಕ್ಕೆ ಬಿಹಾರ ಸಿಎಂ ಬೇಸರ

ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ನೀನು ನಕಲಿ ಮದ್ಯ ಸೇವಿಸಿದರೆ ನೀನೇ ಸಾಯುತ್ತೀಯಾ" ಎಂದು ಹೇಳಿದ್ದಾರೆ.

ಓಟ್ನಾ: ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ನೀನು ನಕಲಿ ಮದ್ಯ ಸೇವಿಸಿದರೆ ನೀನೇ ಸಾಯುತ್ತೀಯಾ" ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮದ್ಯ ನಿಷೇಧವನ್ನು ಸಮರ್ಥಿಸಿಕೊಂಡ ನಿತೀಶ್ ಕುಮಾರ್, ರಾಜ್ಯದಲ್ಲಿ ಮದ್ಯ ನಿಷೇಧ ನೀತಿಯಿಂದ ಹಲವು ಜನರಿಗೆ ಪ್ರಯೋಜನವಾಗಿದೆ. ತಮ್ಮ ಕ್ರಮದಿಂದ ಹೆಚ್ಚು ಜನ ಮದ್ಯಪಾನವನ್ನು ತ್ಯಜಿಸಿದ್ದಾರೆ ಎಂದು ಹೇಳಿದರು.

"ಮದ್ಯ ನಿಷೇಧದಿಂದ ಹಲವಾರು ಜನರಿಗೆ ಲಾಭವಾಗಿದೆ. ಹೆಚ್ಚಿನ ಸಂಖ್ಯೆಯ ಜನರು ಮದ್ಯವನ್ನು ತ್ಯಜಿಸಿದ್ದಾರೆ... ಇದು ಒಳ್ಳೆಯದು. ಹಲವಾರು ಜನ ಇದನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಆದರೆ ಕೆಲವರು ಮಾತ್ರ ತೊಂದರೆ ಕೊಡುತ್ತಿದ್ದಾರೆ. ಅಂತವರನ್ನು ಗುರುತಿಸಿ ಬಂಧಿಸುವಂತೆ ನಾನು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ನಿತೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಮದ್ಯೆ ಸೇವಿಸುವ ಬಡವರನ್ನು ಬಂಧಿಸಬೇಡಿ ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ. ಆದರೆ ಮದ್ಯವನ್ನು ತಯಾರಿಸುವ ಮತ್ತು ಮದ್ಯದ ವ್ಯಾಪಾರವನ್ನು ನಡೆಸುವ ಜನರನ್ನು ಬಂಧಿಸಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT