ಸಂಗ್ರಹ ಚಿತ್ರ 
ದೇಶ

ಹುಲಿ ದಾಳಿಗೆ ಮಹಿಳೆ ಬಲಿ: ಈ ಜಿಲ್ಲೆಯೊಂದರಲ್ಲೇ ಒಂದು ವರ್ಷದಲ್ಲಿ ವ್ಯಾಘ್ರನ ಅಟ್ಟಹಾಸಕ್ಕೆ 50 ಬಲಿ

ಚಂದ್ರಾಪುರ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ 50 ವರ್ಷದ ಮಹಿಳೆಯೊಬ್ಬರನ್ನು ಹುಲಿ ಬಲಿಪಡೆದುಕೊಂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಂದ್ರಾಪುರ(ಮಹಾರಾಷ್ಟ್ರ): ಚಂದ್ರಾಪುರ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ 50 ವರ್ಷದ ಮಹಿಳೆಯೊಬ್ಬರನ್ನು ಹುಲಿ ಬಲಿಪಡೆದುಕೊಂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇಲ್ಲಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸಾವೊಲಿ ವ್ಯಾಪ್ತಿಯ ಖಾದಿ ಗ್ರಾಮದ ಬಳಿಯ ಜಮೀನಿನಲ್ಲಿ ಹತ್ತಿ ಉಳುಮೆ ಮಾಡುತ್ತಿದ್ದಾಗ ಸ್ವರೂಪಾ ಟೆಲಿಟಿವಾರ್ ಮೇಲೆ ಹುಲಿ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಕೆ ಮೃತಪಟ್ಟಿದ್ದಾಳೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಲೋಂಕರ್ ಹೇಳಿದ್ದಾರೆ. 

ಜಿಲ್ಲೆಯಲ್ಲಿ ಈ ವರ್ಷ ಒಟ್ಟು 50 ಮಂದಿ ಹುಲಿ ದಾಳಿಗೆ ಬಲಿಯಾಗಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಹುಲಿಗಳಿಂದ 44 ದಾಳಿಗಳು ಮತ್ತು ಚಿರತೆಗಳಿಂದ ಆರು ದಾಳಿಗಳು ನಡೆದಿವೆ ಎಂದು ಅವರು ಹೇಳಿದರು.

ಚಂದ್ರಾಪುರದ ಉಸ್ತುವಾರಿ ಸಚಿವರಾಗಿರುವ ಮಹಾರಾಷ್ಟ್ರದ ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಅವರು ಚಂದ್ರಾಪುರದಲ್ಲಿ ಹುಲಿ-ಮಾನವ ಸಂಘರ್ಷ ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಜಿಲ್ಲಾ ಮಾಹಿತಿ ಕಛೇರಿಯ ಪ್ರಕಾರ, ಡಿಸೆಂಬರ್ 14ರಂದು ಮುಲ್ ಮತ್ತು ಸಾವೋಲಿ ತಹಸಿಲ್‌ಗಳಲ್ಲಿ ಪ್ರತ್ಯೇಕ ಹುಲಿ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ. ಡಿಸೆಂಬರ್ 15ರಂದು ಖೇಡಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಹುಲಿ-ಮಾನವ ಸಂಘರ್ಷ ತಡೆಯಲು ವಿಫಲವಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT