ಸಾಂದರ್ಭಿಕ ಚಿತ್ರ 
ದೇಶ

ವಿಜಯವಾಡ: ಕೃಷ್ಣಾನದಿಯಲ್ಲಿ ದುರಂತ; ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲು, ಇಬ್ಬರ ಶವ ಪತ್ತೆ!

ಆಂಧ್ರ ಪ್ರದೇಶದ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾಗಿ ಇಬ್ಬರ ಶವ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ.

ವಿಜಯವಾಡ: ಆಂಧ್ರ ಪ್ರದೇಶದ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾಗಿ ಇಬ್ಬರ ಶವ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ.

ವಿಜಯವಾಡ ಜಿಲ್ಲೆಯ ಯನಮಲಕುಡರು ಬಳಿಯ ಕೃಷ್ಣಾ ನದಿಯಲ್ಲಿ ಏಳು ವಿದ್ಯಾರ್ಥಿಗಳು ಈಜಲು ಹೋಗಿದ್ದರು. ಈ ಪೈಕಿ ಐದು ವಿದ್ಯಾರ್ಥಿಗಳು ನೀರು ಪಾಲಾಗಿದ್ದು, ಇಬ್ಬರನ್ನು ರಕ್ಷಿ,ಸಲಾಗಿದೆ. ಅಂತೆಯೇ ಇಬ್ಬರ ಶವ ಪತ್ತೆಯಾಗಿದ್ದು  ನಾಪತ್ತೆಯಾಗಿರುವ ಮೂರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ನಾಪತ್ತೆಯಾಗಿರುವ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿವೆ.

ಈಜಲು ತೆರಳಿದ್ದ ವಿದ್ಯಾರ್ಥಿಗಳೆಲ್ಲರೂ 12 ಮತ್ತು 13 ವರ್ಷ ವಯಸ್ಸಿನವರಾಗಿದ್ದು, ಎಲ್ಲರೂ 7ನೇ ತರಗತಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಸಂಕ್ರಾಂತಿ ರಜೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ಬಂದಿದ್ದರು. ವಿದ್ಯಾರ್ಥಿಗಳು ಕೃಷ್ಣಾ ಜಿಲ್ಲೆಯ ಏತೂರು ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿಗಾಮ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಜಿ ನಾಗೇಶ್ವರ ರೆಡ್ಡಿ ಈ ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳು ನದಿಗೆ ಈಜಲು ಹೋಗಿದ್ದರು. ನಾಪತ್ತೆಯಾಗಿರುವ ವಿದ್ಯಾರ್ಥಿಗಳನ್ನು ಅಜಯ್ (12), ಚರಣ್ (13), ಬಾಲಯೇಸು (12), ರಾಕೇಶ್ (12) ಮತ್ತು ಸನ್ನಿ (12) ಎಂದು ಗುರುತಿಸಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಹುಡುಕಾಟ ನಡೆಸುತ್ತಿವೆ. ಭಾರತೀಯ ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಎರಡು ಹೆಲಿಕಾಪ್ಟರ್‌ಗಳು ಮತ್ತು ನಾಲ್ಕು ದೋಣಿಗಳನ್ನು ಒಳಗೊಂಡ ಶೋಧ ಕಾರ್ಯಾಚರಣೆಯ ನಂತರ ಬಂಗಾಳಕೊಲ್ಲಿಯ ಪುಡಿಮಾಡಕ ದಡದಲ್ಲಿ ಮೃತದೇಹಗಳನ್ನು ಪತ್ತೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ