ಅಫ್ತಾಬ್ ಅಮೀನ್ ಪೂನಾವಾಲಾ 
ದೇಶ

ಶ್ರದ್ಧಾ ಹತ್ಯೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ ಅಫ್ತಾಬ್, ನಾಳೆ ವಿಚಾರಣೆ ಸಾಧ್ಯತೆ

ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾ ವಾಕರ್ ನನ್ನು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಫ್ತಾಬ್ ಅಮೀನ್ ಪೂನಾವಾಲಾ ಶುಕ್ರವಾರ ಜಾಮೀನು ಕೋರಿ ಇಲ್ಲಿನ ನ್ಯಾಯಾಲಯಕ್ಕೆ ಅರ್ಜಿ...

ನವದೆಹಲಿ: ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾ ವಾಕರ್ ನನ್ನು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಫ್ತಾಬ್ ಅಮೀನ್ ಪೂನಾವಾಲಾ ಶುಕ್ರವಾರ ಜಾಮೀನು ಕೋರಿ ಇಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವೃಂದಾ ಕುಮಾರಿ ಅವರ ಮುಂದೆ ಶನಿವಾರ ಜಾಮೀನು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಂಡಿದ್ದು, ಆರೋಪಪಟ್ಟಿ ಇನ್ನೂ ಸಲ್ಲಿಕೆಯಾಗಬೇಕಿರುವುದರಿಂದ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿಡುವ ಅಗತ್ಯ ಇಲ್ಲ ಎಂದು ವಕೀಲರು ತಿಳಿಸಿದ್ದಾರೆ.

ಡಿಸೆಂಬರ್ 9 ರಂದು ಪೂನಾವಾಲಾ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿಯಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾಳನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, ಸುಮಾರು ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟಿದ್ದನು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT