ನಾಲ್ಕು ಕಾಲುಗಳುಳ್ಳ ಮಗು. 
ದೇಶ

ನಾಲ್ಕು ಕಾಲುಗಳುಳ್ಳ ಮಗುವಿಗೆ ಜನ್ಮ ನೀಡಿದ ತಾಯಿ!

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 'ನಾಲ್ಕು' ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಗ್ವಾಲಿಯರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 'ನಾಲ್ಕು' ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಎಂಬ ಮಹಿಳೆ ನಾಲ್ಕು ಕಾಲುಗಳುಳ್ಳ ಮಗುವಿಗೆ ಜನ್ಮ ನೀಡಿದ್ದಾರೆ.

ಜನನದ ನಂತರ ಮಗುವಿನ ತೂಕ 2.3 ಕೆ.ಜಿ ಯಷ್ಟಿದೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗ್ವಾಲಿಯರ್‌ನ ಜಯರೋಗ ಆಸ್ಪತ್ರೆಯ ಅಧೀಕ್ಷಕರೊಂದಿಗೆ ವೈದ್ಯರ ತಂಡವು ಶಿಶುವನ್ನು ಪರೀಕ್ಷಿಸಿತು.

ಜಯರೋಗ್ಯ ಆಸ್ಪತ್ರೆ ಸಮೂಹದ ಸೂಪರಿಂಟೆಂಡೆಂಟ್ ಡಾ.ಆರ್.ಕೆ.ಎಸ್.ಧಕಡ್ ಅವರು ಮಾತನಾಡಿ, "ಮಗುವಿಗೆ ನಾಲ್ಕು ಕಾಲುಗಳಿವೆ, ಆಕೆಗೆ ದೈಹಿಕ ವಿಕಲತೆ ಇದೆ. ಬೆಳವಣಿಗೆ ಸಂದರ್ಭದಲ್ಲಿ ಕೆಲವು ಭ್ರೂಣಗಳು ಹೆಚ್ಚುವರಿಯಾಗುತ್ತವೆ, ಇದನ್ನು ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಭ್ರೂಣವು ಎರಡು ಭಾಗಗಳಾಗಿ ವಿಭಜನೆಯಾದಾಗ, ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ, ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ ಎಂದು ಹೇಳಿದ್ದಾರೆ.

''ಇದೀಗ ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ಅಂಗವಿಕಲತೆ ಇದೆಯೇ ಎಂದು ತಪಾಸಣೆ ನಡೆಸುತ್ತಿದ್ದು, ಪರೀಕ್ಷೆ ಬಳಿಕ ಆಕೆ ಆರೋಗ್ಯವಾಗಿದ್ದರೆ ಶಸ್ತ್ರಚಿಕಿತ್ಸೆ ಮೂಲಕ ಹೆಚ್ಚುವರಿ ಕಾಲುಗಳನ್ನು ತೆಗೆಯಲಾಗುತ್ತದೆ. ಇದರಿಂದ ಆಕೆ ಸಹಜ ಜೀವನ ನಡೆಸಬಹುದು ಎಂದು ತಿಳಿಸಿದ್ದಾರೆ.

ಸದ್ಯ ಕಮಲರಾಜ ಆಸ್ಪತ್ರೆಯ ಶಿಶುವೈದ್ಯಕೀಯ ವಿಭಾಗದ ವಿಶೇಷ ನವಜಾತ ನಿಗಾ ಘಟಕದಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶಿಶುವಿನ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಆಕೆಯ ಹೆಚ್ಚುವರಿ ಕಾಲುಗಳನ್ನು ತೆಗೆಯುವ ಚಿಂತನೆ ನಡೆಸಿದ್ದಾರೆ. ಸದ್ಯ ಹೆಣ್ಣು ಮಗು ಸಂಪೂರ್ಣ ಆರೋಗ್ಯವಾಗಿದೆ' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT