ಅರವಿಂದ್ ಕೇಜ್ರಿವಾಲ್ 
ದೇಶ

ಇನ್ನು ಹತ್ತು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುವ ಶಕ್ತಿ ಆಪ್ ಗೆ ಮಾತ್ರ ಇದೆ, ಗುಜರಾತ್ ನಲ್ಲಿ 2027ರಲ್ಲಿ ಆಪ್ ಅಧಿಕಾರಕ್ಕೆ ಬರುತ್ತದೆ: ಅರವಿಂದ್ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷ 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರ ರಚಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ನವದೆಹಲಿ: ಆಮ್ ಆದ್ಮಿ ಪಕ್ಷ 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರ ರಚಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ಇಂದು ದೆಹಲಿಯಲ್ಲಿ ಅವರು ಆಪ್ ರಾಷ್ಟ್ರೀಯ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಇನ್ನು 10 ವರ್ಷಗಳಲ್ಲಿ ಆಪ್ ಮಾತ್ರ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಲು ಸಾಧ್ಯ, ಕೈಗಾರಿಕೋದ್ಯಮಿಗಳು ಮತ್ತು ಆಗರ್ಭ ಶ್ರೀಮಂತರು ದೇಶ ಬಿಟ್ಟು ಹೋಗುತ್ತಿದ್ದಾರೆ. ಅವರಿಗೆ ಬಿಜೆಪಿ ಸರ್ಕಾರ ಕೆಲಸ ಮಾಡುವ ಪೂರಕ ವಾತಾವರಣ ನಿರ್ಮಿಸಿಕೊಡುತ್ತಿಲ್ಲ, ಬಿಜೆಪಿ ಅವರ ಮೇಲೆ ಇಡಿ, ಸಿಬಿಐಯಂತಹ ಸಂಸ್ಥೆಗಳಿಂದ ದಾಳಿ ಮಾಡಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.

ಭಾರತದ ಮೇಲೆ ಪದೇ ಪದೇ ದಾಳಿ ಮಾಡುತ್ತಿದ್ದರೂ ಚೀನಾ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರ ಬಿಡುತ್ತಿರುವುದೇಕೆ, ಜನರು ಇನ್ನಾದರೂ ಚೀನಾ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಬೇಕು. ದುಪ್ಪಟ್ಟು ವೆಚ್ಚವಾದರೂ ಭಾರತೀಯ ವಸ್ತುಗಳನ್ನು ನಾವು ಹೆಚ್ಚೆಚ್ಚು ಬಳಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಈ ದೇಶದ ಜನರು ಬಿಜೆಪಿ ಸರ್ಕಾರ ಆಡಳಿತದಡಿಯಲ್ಲಿ ನಿರುದ್ಯೋಗ ಸಮಸ್ಯೆ ಮತ್ತು ಹಣದುಬ್ಬರಗಳಿಂದ ಬೇಸತ್ತು ಹೋಗಿದ್ದಾರೆ. ದೆಹಲಿಯಲ್ಲಿ ಆಪ್ ಸರ್ಕಾರ ಹಣದುಬ್ಬರವನ್ನು ತಗ್ಗಿಸಿ ಉದ್ಯೋಗ ಸೃಷ್ಟಿಮಾಡಬಹುದು ಎಂದು ತೋರಿಸಿಕೊಟ್ಟಿದೆ. ಭಾರತದಲ್ಲಿ ದೆಹಲಿಯಲ್ಲಿಯೇ ಹಣದುಬ್ಬರ ಅತ್ಯಂತ ಕಡಿಮೆಯಾಗಿದ್ದು ಶೇಕಡಾ 4.7ರಷ್ಟಿದೆ ಎಂದರು.

ದೇಶದಲ್ಲಿ ಬದಲಾವಣೆ ತಂದು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದೇಶದ ಜನರು ಬಡಿದಾಡದಂತೆ ಮಾಡುವ ಶಕ್ತಿ ಆಪ್ ಗೆ ಮಾತ್ರವಿದೆ ಎಂದು ಕೇಜ್ರಿವಾಲ್ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

SCROLL FOR NEXT