ಅರವಿಂದ್ ಕೇಜ್ರಿವಾಲ್ 
ದೇಶ

ಇನ್ನು ಹತ್ತು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುವ ಶಕ್ತಿ ಆಪ್ ಗೆ ಮಾತ್ರ ಇದೆ, ಗುಜರಾತ್ ನಲ್ಲಿ 2027ರಲ್ಲಿ ಆಪ್ ಅಧಿಕಾರಕ್ಕೆ ಬರುತ್ತದೆ: ಅರವಿಂದ್ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷ 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರ ರಚಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ನವದೆಹಲಿ: ಆಮ್ ಆದ್ಮಿ ಪಕ್ಷ 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರ ರಚಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ಇಂದು ದೆಹಲಿಯಲ್ಲಿ ಅವರು ಆಪ್ ರಾಷ್ಟ್ರೀಯ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಇನ್ನು 10 ವರ್ಷಗಳಲ್ಲಿ ಆಪ್ ಮಾತ್ರ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಲು ಸಾಧ್ಯ, ಕೈಗಾರಿಕೋದ್ಯಮಿಗಳು ಮತ್ತು ಆಗರ್ಭ ಶ್ರೀಮಂತರು ದೇಶ ಬಿಟ್ಟು ಹೋಗುತ್ತಿದ್ದಾರೆ. ಅವರಿಗೆ ಬಿಜೆಪಿ ಸರ್ಕಾರ ಕೆಲಸ ಮಾಡುವ ಪೂರಕ ವಾತಾವರಣ ನಿರ್ಮಿಸಿಕೊಡುತ್ತಿಲ್ಲ, ಬಿಜೆಪಿ ಅವರ ಮೇಲೆ ಇಡಿ, ಸಿಬಿಐಯಂತಹ ಸಂಸ್ಥೆಗಳಿಂದ ದಾಳಿ ಮಾಡಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.

ಭಾರತದ ಮೇಲೆ ಪದೇ ಪದೇ ದಾಳಿ ಮಾಡುತ್ತಿದ್ದರೂ ಚೀನಾ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರ ಬಿಡುತ್ತಿರುವುದೇಕೆ, ಜನರು ಇನ್ನಾದರೂ ಚೀನಾ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಬೇಕು. ದುಪ್ಪಟ್ಟು ವೆಚ್ಚವಾದರೂ ಭಾರತೀಯ ವಸ್ತುಗಳನ್ನು ನಾವು ಹೆಚ್ಚೆಚ್ಚು ಬಳಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಈ ದೇಶದ ಜನರು ಬಿಜೆಪಿ ಸರ್ಕಾರ ಆಡಳಿತದಡಿಯಲ್ಲಿ ನಿರುದ್ಯೋಗ ಸಮಸ್ಯೆ ಮತ್ತು ಹಣದುಬ್ಬರಗಳಿಂದ ಬೇಸತ್ತು ಹೋಗಿದ್ದಾರೆ. ದೆಹಲಿಯಲ್ಲಿ ಆಪ್ ಸರ್ಕಾರ ಹಣದುಬ್ಬರವನ್ನು ತಗ್ಗಿಸಿ ಉದ್ಯೋಗ ಸೃಷ್ಟಿಮಾಡಬಹುದು ಎಂದು ತೋರಿಸಿಕೊಟ್ಟಿದೆ. ಭಾರತದಲ್ಲಿ ದೆಹಲಿಯಲ್ಲಿಯೇ ಹಣದುಬ್ಬರ ಅತ್ಯಂತ ಕಡಿಮೆಯಾಗಿದ್ದು ಶೇಕಡಾ 4.7ರಷ್ಟಿದೆ ಎಂದರು.

ದೇಶದಲ್ಲಿ ಬದಲಾವಣೆ ತಂದು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದೇಶದ ಜನರು ಬಡಿದಾಡದಂತೆ ಮಾಡುವ ಶಕ್ತಿ ಆಪ್ ಗೆ ಮಾತ್ರವಿದೆ ಎಂದು ಕೇಜ್ರಿವಾಲ್ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT