ಸಂಗ್ರಹ ಚಿತ್ರ 
ದೇಶ

ಗುಜರಾತ್: ಸಾಲ ಹಿಂತಿರುಗಿಸಲು ವಿಫಲವಾದ ಪತಿ, ಆತನ ಪತ್ನಿಯ ಮೇಲೆ ಪದೇ ಪದೇ ಅತ್ಯಾಚಾರ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪಡೆದುಕೊಂಡಿದ್ದ ಸಾಲವನ್ನು ಹಿಂತಿರುಗಿಸಲು ವಿಫಲನಾದ ಆಟೋರಿಕ್ಷಾ ಚಾಲಕನ 37 ವರ್ಷದ ಪತ್ನಿ ಮೇಲೆ ಅತ್ಯಾಚಾರ ಎಸಲಾಗಿದೆ.

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಪಡೆದುಕೊಂಡಿದ್ದ ಸಾಲವನ್ನು ಹಿಂತಿರುಗಿಸಲು ವಿಫಲನಾದ ಆಟೋರಿಕ್ಷಾ ಚಾಲಕನ 37 ವರ್ಷದ ಪತ್ನಿ ಮೇಲೆ ಅತ್ಯಾಚಾರ ಎಸಲಾಗಿದೆ.

ಅಜಿತ್‌ಸಿನ್ಹ್ ಚಾವ್ಡಾ ಎಂಬ ಖಾಸಗಿ ಫೈನಾನ್ಷಿಯರ್ ಮತ್ತು ಅವರ ಬ್ಯುಸಿನೆಸ್ ಪಾಲುದಾರರಿಂದ 50 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಹೀಗಾಗಿ ಅತ್ಯಾಚಾರ ಸಂತ್ರಸ್ತೆಯ ಪತಿ ಪ್ರತಿದಿನ ಬಡ್ಡಿಯಾಗಿ 1,500 ರೂ ಪಾವತಿಸುವಂತೆ ಚಾವ್ಡಾ ಹೇಳಿದ್ದರು. ಆದರೆ, ಸಂತ್ರಸ್ತೆಯ ಪತಿ ಹಣ ಪಾವತಿಸಲು ವಿಫಲವಾದಾಗ, ಚಾವ್ಡಾ ಅವರ ಮನೆಗೆ ಬಲವಂತವಾಗಿ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಕೃತ್ಯವನ್ನು ಚಿತ್ರೀಕರಿಸಿದ್ದಾನೆ.

ಇಷ್ಟೇ ಅಲ್ಲದೆ, ಚಾವ್ಡಾ ಆಟೋ ರಿಕ್ಷಾ ಚಾಲಕನ ಹೆಂಡತಿಯನ್ನು ಬಲವಂತವಾಗಿ ದೇವಸ್ಥಾನಕ್ಕೆ ಕರೆದೊಯ್ದು ಅವಳ ಹಣೆಗೆ 'ಸಿಂಧೂರ' ಹಚ್ಚಿ ಅವಳನ್ನು ತನ್ನ ಹೆಂಡತಿ ಎಂದು ಘೋಷಿಸಿದ್ದಾನೆ. ಬಳಿಕ ಸಂತ್ರಸ್ತೆಯ ಮನೆಗೆ ಆಗಾಗ್ಗೆ ಭೇಟಿ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂದು ಐಎಎನ್‌ಎಸ್ ವರದಿ ತಿಳಿಸಿದೆ.

ಸಂತ್ರಸ್ತೆ ತನ್ನ ದೂರನ್ನು ದಾಖಲಿಸಲು ಆರಂಭದಲ್ಲಿ ರಾಜ್‌ಕೋಟ್ ತಾಲೂಕು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಆದರೆ, ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಆಕೆ ನ್ಯಾಯಾಲಯದ ಮೊರೆ ಹೋಗಿದ್ದು, ನಂತರ ನ್ಯಾಯಾಲಯ ಆಕೆ ವಿರುದ್ಧದ ಅತ್ಯಾಚಾರದ ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದೆ.

ತನ್ನ ವಿರುದ್ಧ ದೂರು ದಾಖಲಿಸಲಾಗುವುದು ಎಂದು ತಿಳಿದ ಚಾವ್ಡಾ, ಸಂತ್ರಸ್ತೆಯ ಪತಿಯನ್ನು ಭೇಟಿ ಮಾಡಿ ಆತನ ಹೆಂಡತಿಗೆ ಹಣ ಪಾವತಿಸುವ ಜೊತೆಗೆ ಸಾಲದ ಮೊತ್ತವನ್ನು ಮರುಪಾವತಿ ಮಾಡುವುದರಿಂದ ವಿನಾಯಿತಿ ನೀಡುವುದಾಗಿ ಆಮಿಷ ಒಡ್ಡಿದ್ದಾನೆ.

ಆದರೆ, ಚಾವ್ಡಾ ಮತ್ತು ಅವನ ಜೊತೆಗಿದ್ದ ಇಬ್ಬರು ಸಹಚರರು ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ಇದರಿಂದಾಗಿ ಆಕೆಯ ಕೈಗೆ ಗಾಯವಾಗಿದೆ. ಈ ಮಧ್ಯೆ, ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮೂವರು ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT