ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಶಾಲಾ ಬಸ್ ಪಲ್ಟಿ, ಓರ್ವ ಸಾವು, 8 ವಿದ್ಯಾರ್ಥಿಗಳು ಸೇರಿ 9 ಮಂದಿಗೆ ಗಾಯ

ಸೈಕಲ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ...

ಗೋರಖ್‌ಪುರ: ಸೈಕಲ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖೋರಬಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈಂಸಾ ಧೋಡಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸೈಕಲ್ ಸವಾರ ತಿಲಕಧಾರಿ(50) ಮೃತಪಟ್ಟಿದ್ದು, ಬಸ್ ಚಾಲಕ ಧರ್ಮೇಂದ್ರ ಯಾದವ್(28) ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

62 ಪ್ರಯಾಣಿಕರಿದ್ದ ಬಸ್ ಡಿಯೋರಿಯಾದಿಂದ ಗೋರಖ್‌ಪುರಕ್ಕೆ ಹೋಗುತ್ತಿತ್ತು ಎಂದು ಶಾಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಬಸ್ ಚಾಲಕ ಹಾಗೂ ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಖೋರಾಬರ್ ಠಾಣೆ ಮತ್ತು ರಾಮನಗರ ಕರ್ಜಹಾ ಪೋಸ್ಟ್‌ನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT