ಪ್ರಧಾನಿ ನರೇಂದ್ರ ಮೋದಿ, ಮೇಘಾಲಯ ರಾಜ್ಯಪಾಲ ಬ್ರಿಗೇಡಿಯರ್ ಬಿಡಿ ಮಿಶ್ರಾ (ನಿವೃತ್ತ), ಈಶಾನ್ಯ ಪರಿಷತ್ತಿನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಜೊತೆ 
ದೇಶ

ಈಶಾನ್ಯ ಭಾರತದ ಅಭಿವೃದ್ಧಿಯನ್ನು ತಡೆಯುವ ಎಲ್ಲಾ ಅಡೆತಡೆಗಳನ್ನು ನಮ್ಮ ಸರ್ಕಾರ ತೆಗೆದುಹಾಕಿದೆ: ಪ್ರಧಾನಿ ಮೋದಿ

ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿಲ್ಲಾಂಗ್: ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಈಶಾನ್ಯ ಪರಿಷತ್ತಿನ(NEC) ಸುವರ್ಣ ವರ್ಷಾಚರಣೆಯ ಸಂದರ್ಭ ಇಂದು ಶಿಲ್ಲಾಂಗ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಈಶಾನ್ಯ ರಾಜ್ಯಗಳಿಗೆ ವಾಯುಸಂಚಾರ ಸಂಪರ್ಕ ಸೇವೆಯನ್ನು ಹೆಚ್ಚಿಸಿರುವುದು ಕೃಷಿ ಉತ್ಪನ್ನಗಳ ರಫ್ತಿಗೆ ಸಹಾಯಕವಾಗಿದ್ದು ರೈತರಿಗೆ ಅನುಕೂಲವಾಗಿದೆ ಎಂದರು.

ಖತಾರ್ ನಲ್ಲಿ ಫೀಫಾ ವಿಶ್ವಕಪ್ ಅಂತಿಮ ಪಂದ್ಯಕ್ಕೆ ಮುನ್ನ ಈಶಾನ್ಯ ಭಾಗಗಳ ಅಭಿವೃದ್ಧಿಗೆ ಇರುವ ಅಡೆತಡೆಗಳಿಗೆ ಸರ್ಕಾರ ಕೆಂಪು ಕಾರ್ಡ್ ತೋರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಭ್ರಷ್ಟಾಚಾರ, ತಾರತಮ್ಯ, ಹಿಂಸಾಚಾರ, ವೋಟ್ ಬ್ಯಾಂಕ್ ರಾಜಕೀಯದಂತಹ ಸಮಸ್ಯೆಗಳನ್ನು ತಮ್ಮ ಸರ್ಕಾರ ನಿವಾರಿಸಿದೆ ಎಂದು ಇಂದಿನ ತಮ್ಮ 26 ನಿಮಿಷಗಳ ಭಾಷಣದಲ್ಲಿ ಪ್ರಧಾನಿ ಹೇಳಿದ್ದಾರೆ. ಈ ಹಿಂದೆ ಈಶಾನ್ಯ ರಾಜ್ಯಗಳನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿದ್ದವು. ಈಗ ನಾವು ಆ ವಿಭಜನೆಯನ್ನು ತೆಗೆದಿದ್ದೇನೆ ಎಂದರು. 

ಇಂದು ಪ್ರಧಾನ ಮಂತ್ರಿಗಳು ಈ ಭಾಗದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಿ, ಇನ್ನು ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ನ್ಯೂ ಶಿಲ್ಲಾಂಗ್ ಟೌನ್ ಶಿಪ್ ನಲ್ಲಿ ಐಐಎಂ-ಶಿಲ್ಲಾಂಗ್ ಕ್ಯಾಂಪಸ್ ನ್ನು ಉದ್ಘಾಟಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ Shimron Hetmyer ಸಿಡಿಲಬ್ಬರದ ಬ್ಯಾಟಿಂಗ್, 17 ವರ್ಷಗಳ ಹಿಂದಿನ ಕ್ರಿಸ್ ಗೇಯ್ಲ್ ದಾಖಲೆ ಉಡೀಸ್!

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

SCROLL FOR NEXT