ಅಂಪಾರೀನ್ ಲಿಂಗ್ಡೋಹ್ 
ದೇಶ

ಮೇಘಾಲಯ: ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ, ಆಡಳಿತರೂಢ ಎನ್‌ಪಿಪಿ ಸೇರ್ಪಡೆ

ನಿರೀಕ್ಷೆಯಂತೆ ಪಕ್ಷದಿಂದ ಅಮಾನತುಗೊಂಡಿದ್ದ ಮೇಘಾಲಯದ ಇಬ್ಬರು ಕಾಂಗ್ರೆಸ್ ಶಾಸಕರಾದ ಅಂಪಾರೀನ್ ಲಿಂಗ್ಡೋಹ್ ಮತ್ತು ಮೊಹೆಂದ್ರೋ ರಾಪ್ಸಾಂಗ್ ಅವರು ಸೋಮವಾರ ವಿಧಾನಸಭೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿ...

ಗುವಾಹಟಿ: ನಿರೀಕ್ಷೆಯಂತೆ ಪಕ್ಷದಿಂದ ಅಮಾನತುಗೊಂಡಿದ್ದ ಮೇಘಾಲಯದ ಇಬ್ಬರು ಕಾಂಗ್ರೆಸ್ ಶಾಸಕರಾದ ಅಂಪಾರೀನ್ ಲಿಂಗ್ಡೋಹ್ ಮತ್ತು ಮೊಹೆಂದ್ರೋ ರಾಪ್ಸಾಂಗ್ ಅವರು ಸೋಮವಾರ ವಿಧಾನಸಭೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ)ಗೆ ಸೇರ್ಪಡೆಯಾಗಿದ್ದಾರೆ.

ಕಳೆದ ಫೆಬ್ರವರಿಯಲ್ಲಿ, ಎನ್ ಪಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಬೆಂಬಲಿಸಿದ್ದ ಈ ಇಬ್ಬರೂ ಶಾಸಕರು ಸೇರಿದಂತೆ ಮೇಘಾಲಯದ ಎಲ್ಲಾ ಐವರು ಶಾಸಕರನ್ನು ಕಾಂಗ್ರೆಸ್ ಅಮಾನತುಗೊಳಿಸಿತ್ತು. ಅಂದಿನಿಂದ, ಅವರು ಗ್ರ್ಯಾಂಡ್ ಓಲ್ಡ್ ಪಾರ್ಟಿಯೊಂದಿಗೆ ವಾಸ್ತವವಾಗಿ ಯಾವುದೇ ಸಂಬಂಧವನ್ನು ಹೊಂದಿರಲಿಲ್ಲ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಮಾಜಿ ಸಚಿವೆ ಲಿಂಗ್ಡೋ, ರಾಜ್ಯದ ಜನರೊಂದಿಗೆ ಕಾಂಗ್ರೆಸ್ ಸಂಪರ್ಕ ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ.

“ನಾನು ಕಾಂಗ್ರೆಸ್‌ನ ಕಟ್ಟಾ ಬೆಂಬಲಿಗ. ಆದಾಗ್ಯೂ, ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆಗಳು ಅದು ತಾನು ಸಾಗುವ ದಿಕ್ಕಿನ ಬಗ್ಗೆ ಪ್ರಜ್ಞೆ ಕಳೆದುಕೊಂಡಿದೆ ಎಂದು ನಂಬುವಂತೆ ಮಾಡಿದೆ. ಈ ಬಗ್ಗೆ ಪಕ್ಷ ಮತ್ತು ಅದರ ನಾಯಕತ್ವ ಚಿಂತನೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಅಂತಹ ಆತ್ಮಾವಲೋಕನವನ್ನು ನಡೆಸುವ ಪ್ರಾಮಾಣಿಕ ಪ್ರಯತ್ನಗಳು ವಿಫಲವಾಗಿವೆ ಎಂದು ನಾನು ನಂಬುತ್ತೇನೆ" ಎಂದು ಲಿಂಗ್ಡೋಹ್ ಪತ್ರದಲ್ಲಿ ಬರೆದಿದ್ದಾರೆ.

"... ಸೇವೆ ಸಲ್ಲಿಸಲು ಇದು ನನಗೆ ಉತ್ತಮ ವೇದಿಕೆ ಎಂದು ನಾನು ಇನ್ನು ಮುಂದೆ ನಂಬುವುದಿಲ್ಲ. ಆದ್ದರಿಂದ, ತೀವ್ರ ವಿಷಾದದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ”ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT