ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಫುಟ್‌ಪಾತ್‌ನಲ್ಲಿ ನಿಂತಿದ್ದ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ವೇಗವಾಗಿ ಬಂದ ಕಾರು

ಭಾನುವಾರ ನಗರದ ಗುಲಾಬಿ ಬಾಗ್ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕರಿಂದ 10 ವರ್ಷದೊಳಗಿನ ಮೂವರು ಮಕ್ಕಳು ಗಾಯಗೊಂಡಿದ್ದಾರೆ.

ನವದೆಹಲಿ: ಭಾನುವಾರ ನಗರದ ಗುಲಾಬಿ ಬಾಗ್ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕರಿಂದ 10 ವರ್ಷದೊಳಗಿನ ಮೂವರು ಮಕ್ಕಳು ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಬೆಳಗ್ಗೆ 9 ಗಂಟೆಗೆ ಲೀಲಾವತಿ ಶಾಲೆಯ ಬಳಿ ಈ ಘಟನೆ ನಡೆದಿದ್ದು, 30 ವರ್ಷದ ವ್ಯಕ್ತಿಯೊಬ್ಬ ವಾಹನದ ನಿಯಂತ್ರಣ ತಪ್ಪಿ ಫುಟ್‌ಪಾತ್‌ನಲ್ಲಿ ನಿಂತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದಿದ್ದಾನೆ. ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರಲ್ಲಿ ನಾಲ್ಕು ಮತ್ತು 10 ವರ್ಷ ವಯಸ್ಸಿನ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಆರು ವರ್ಷದ ಮಗು ತೀವ್ರ ನಿಗಾದಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರು ಚಲಾಯಿಸುತ್ತಿದ್ದ ಆರೋಪಿ ಗಜೇಂದರ್ ನನ್ನು ದಾರಿಹೋಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದಕ್ಕಾಗಿ ಆರೋಪಿಗೆ ಥಳಿಸಿದ್ದಾರೆ. ಬಳಿಕ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾರಿಹೋಕರ ಪ್ರಕಾರ, ಕಾರು ಫುಟ್‌ಪಾತ್‌ಗೆ ಡಿಕ್ಕಿ ಹೊಡೆದು ಮಕ್ಕಳಿಗೆ ಡಿಕ್ಕಿ ಹೊಡೆದ ನಂತರ ನಿಂತಿತು. ಕಾರಿನಲ್ಲಿದ್ದ ಇಬ್ಬರು ಓಡಿಹೋಗಲು ಪ್ರಯತ್ನಿಸಿದರು. ಆದರೆ, ಕಾರಿನ ಟೈರ್ ಒಡೆದು ವಾಹನವು ಇದ್ದಕ್ಕಿದ್ದಂತೆ ನಿಂತಿತು ಎಂದು ಅವರು ಹೇಳಿದರು. ಸ್ಥಳೀಯರು ಇಬ್ಬರನ್ನು ಕೊಠಡಿಯಲ್ಲಿ ಕೂಡಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯಾರೋ ಡ್ರೈವಿಂಗ್ ಕಲಿಯುತ್ತಿದ್ದಾರೆ ಎಂದು ಮೊದಲಿಗೆ ಭಾವಿಸಿದೆವು. ಕಾರು ಅದೇ ಪ್ರದೇಶದಲ್ಲಿ ಮೂರು ಸುತ್ತು ಹಾಕಿತು. ಚಾಲಕ ಪಾನಮತ್ತನಾಗಿದ್ದ. ಈ ಪ್ರದೇಶದಲ್ಲಿ ಶಾಲೆ ಇದೆ ಎಂದು ಕೆಲವರು ಎಚ್ಚರಿಸಿದರೂ ವಾಹನ ನಿಲ್ಲಿಸಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸಂತ್ರಸ್ತರ ಕುಟುಂಬಸ್ಥರು ಹಾಗೂ ಸ್ಥಳೀಯರು ಅಪಘಾತ ಸ್ಥಳದ ಬಳಿ ಜಮಾಯಿಸಿ ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT