ಪ್ರತಿಭಟನೆ ಚಿತ್ರ 
ದೇಶ

ಉತ್ತರ ಪ್ರದೇಶ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ; ಕಲ್ಲು ತೂರಾಟ, ಬೈಕ್‌ಗೆ ಬೆಂಕಿ

ಉತ್ತರಪ್ರದೇಶದ ಅಲಹಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸುವ ವಿವಾದದ ನಂತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಅಲಹಾಬಾದ್: ಉತ್ತರಪ್ರದೇಶದ ಅಲಹಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸುವ ವಿವಾದದ ನಂತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. 

ನಂತರ ಘಟನಾ ಸ್ಥಳಕ್ಕೆ ಬಂದ ಪೊಲೀಸರ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರು. ಇನ್ನು ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ಈ ದಾಳಿಯಲ್ಲಿ ಎರಡೂ ಕಡೆಯ ಹಲವರು ಗಾಯಗೊಂಡಿದ್ದಾರೆ. 

ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಪೊಲೀಸರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ವಿದ್ಯಾರ್ಥಿ ಸಂಘದ ಕಚೇರಿ ಬಳಿ ವಿದ್ಯಾರ್ಥಿಗಳನ್ನು ಕೂರಿಸಲಾಗಿದೆ. ಅಲ್ಲದೆ ಎಲ್ಲಾ ದೂರುಗಳನ್ನು ಆಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ರಮಿತ್ ಶರ್ಮಾ ತಿಳಿಸಿದರು.

ಹಿಂಸಾಚಾರ ಮತ್ತು ಗಲಾಟೆಯ ದೃಷ್ಟಿಯಿಂದ ಅಲಹಾಬಾದ್ ವಿಶ್ವವಿದ್ಯಾಲಯವನ್ನು ಡಿಸೆಂಬರ್ 20ರಂದು ಒಂದು ದಿನದ ಮಟ್ಟಿಗೆ ಮುಚ್ಚಲಾಗುತ್ತದೆ.

ತಿಂಗಳಿನಿಂದ ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳದ ವಿರುದ್ಧ ಪ್ರತಿಭಟನೆಯ ಭಾಗವಾಗಿದ್ದ ವಿದ್ಯಾರ್ಥಿಯೊಬ್ಬರು ಕ್ಯಾಂಪಸ್‌ನಲ್ಲಿರುವ ಬ್ಯಾಂಕ್‌ಗೆ ಹೋಗಲು ಬಯಸಿದ್ದರು. ಆದರೆ ಸಿಬ್ಬಂದಿ ಅವರನ್ನು ಒಳಗೆ ಬಿಡಲಿಲ್ಲ. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ಹೊಡೆದಾಟದ ಜತೆಗೆ ಕಲ್ಲು ತೂರಾಟವೂ ನಡೆದಿದೆ.

ವಿದ್ಯಾರ್ಥಿ ಸಂಘದ ನಾಯಕ ಅಜಯ್ ಯಾದವ್ ಸಾಮ್ರಾಟ್ ಪ್ರತಿಭಟನಾಕಾರರ ನೇತೃತ್ವ ವಹಿಸಿದ್ದಾರೆ. ಕಳೆದ ತಿಂಗಳು ಸಹ, ಉಪಕುಲಪತಿ ಸಂಗೀತಾ ಶ್ರೀವಾಸ್ತವ ಅವರು ಕಚೇರಿಯಿಂದ ಹೊರಟು ತಮ್ಮ ಕಾರಿನ ಕಡೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿಗಳು ಘೇರಾವ್ ಹಾಕಿದರು. ಶುಲ್ಕ ಹೆಚ್ಚಳವನ್ನು ಹಿಂಪಡೆಯುವುದಿಲ್ಲ ಎಂದು ವಿಶ್ವವಿದ್ಯಾಲಯದ ಆಡಳಿತ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT