ಸಾಂದರ್ಭಿಕ ಚಿತ್ರ 
ದೇಶ

ಅಮೆರಿಕ, ಚೀನಾದಲ್ಲಿ ಮತ್ತೆ ಕೊರೋನಾ ಉಲ್ಬಣ: ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಅಮೆರಿಕದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳು ಹಠಾತ್ ಉಲ್ಬಣಗೊಂಡಿದ್ದು, ಹೊಸ ರೂಪಾಂತರಗಳ ಬಗ್ಗೆ ನಿಗಾ ವಹಿಸಲು ಪಾಸಿಟಿವ್ ಮಾದರಿಗಳ ಸಂಪೂರ್ಣ ಜೀನೋಮ್ ಜೀನೋಮ್ ಸೀಕ್ವೆನ್ಸಿಂಗ್ ಗೆ ಸಜ್ಜಾಗುವಂತೆ...

ನವದೆಹಲಿ: ಚೀನಾ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಅಮೆರಿಕದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳು ಹಠಾತ್ ಉಲ್ಬಣಗೊಂಡಿದ್ದು, ಹೊಸ ರೂಪಾಂತರಗಳ ಬಗ್ಗೆ ನಿಗಾ ವಹಿಸಲು ಪಾಸಿಟಿವ್ ಮಾದರಿಗಳ ಸಂಪೂರ್ಣ ಜೀನೋಮ್ ಜೀನೋಮ್ ಸೀಕ್ವೆನ್ಸಿಂಗ್ ಗೆ ಸಜ್ಜಾಗುವಂತೆ ಕೇಂದ್ರ ಸರ್ಕಾರ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಇಂತಹ ಕ್ರಮಗಳು ದೇಶದಲ್ಲಿ ಪತ್ತೆಯಾಗುವ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ನಿಯಂತ್ರಿಸಲು ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಕೋವಿಡ್-ಸೂಕ್ತ ನಡವಳಿಕೆ ಕಾರ್ಯತಂತ್ರದ ಮೇಲೆ ಭಾರತ ತನ್ನ ಗಮನವನ್ನು ಕೇಂದ್ರೀಕರಿಸಿದ್ದು, ಕೊರೋನಾ ವೈರಸ್ ಹರಡುವಿಕೆಯನ್ನು ನಿರ್ಬಂಧಿಸಲು ಸಮರ್ಥವಾಗಿದೆ. ದೇಶದಲ್ಲಿ ಪ್ರಸ್ತುತ 1,200 ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಲಾಗಿದೆ.

ಕೋವಿಡ್ ನ ಸಾರ್ವಜನಿಕ ಆರೋಗ್ಯ ಸವಾಲು ಪ್ರಪಂಚದಾದ್ಯಂತ ಇನ್ನೂ ಮುಂದುವರೆದಿದೆ ಮತ್ತು ವಾರಕ್ಕೆ ಸುಮಾರು 35 ಲಕ್ಷ ಪ್ರಕರಣಗಳು ವರದಿಯಾಗುತ್ತವೆ ಎಂದು ಭೂಷಣ್ ಹೇಳಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ಸಚಿವಾಲಯವು ಹೊರಡಿಸಿದ COVID-19 ಸಂದರ್ಭದ ಪರಿಷ್ಕೃತ ಮಾರ್ಗಸೂಚಿಗಳನ್ನು ಭೂಷಣ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೊಸ SARS-CoV-2 ರೂಪಾಂತರಗಳ ಏಕಾಏಕಿ ಪತ್ತೆಹಚ್ಚಲು ಮತ್ತು ಒಳಗೊಂಡಿರುವ ಶಂಕಿತ ಮತ್ತು ದೃಢಪಡಿಸಿದ ಪ್ರಕರಣಗಳ ಆರಂಭಿಕ ಪತ್ತೆ, ಪ್ರತ್ಯೇಕತೆ, ಪರೀಕ್ಷೆ ಮತ್ತು ಸಮಯೋಚಿತ ನಿರ್ವಹಣೆಗೆ ಇದು ಕರೆ ನೀಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT