ಸಂಗ್ರಹ ಚಿತ್ರ 
ದೇಶ

1999ರ ಕೊಲೆ ಪ್ರಕರಣದಿಂದ ಭೂಗತ ಪಾತಕಿ ಚೋಟಾ ರಾಜನ್ ಖುಲಾಸೆ!

1999 ರಲ್ಲಿ ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯನ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈನ ಸೆಷನ್ಸ್ ನ್ಯಾಯಾಲಯವು ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನನ್ನು ಖುಲಾಸೆ ಮಾಡಿದೆ.

ಮುಂಬೈ: 1999 ರಲ್ಲಿ ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯನ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈನ ಸೆಷನ್ಸ್ ನ್ಯಾಯಾಲಯವು ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನನ್ನು ಖುಲಾಸೆ ಮಾಡಿದೆ.
  
ನ್ಯಾಯಾಲಯವು ಡಿಸೆಂಬರ್ 17 ರಂದು ರಾಜನ್ ಅವರ ಖುಲಾಸೆ ಮನವಿಯನ್ನು ಅಂಗೀಕರಿಸಿತ್ತು. ಇಂದು ಈ ಸಂಬಂಧ ವಿವರವಾದ ಆದೇಶವನ್ನು ನೀಡಿದೆ ಎನ್ನಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, ದಾವೂದ್ ಗ್ಯಾಂಗ್‌ನ ಸದಸ್ಯನೆಂದು ಹೇಳಲಾದ ಅನಿಲ್ ಶರ್ಮಾ, ಸೆಪ್ಟೆಂಬರ್ 2, 1999 ರಂದು ಮುಂಬೈ ಉಪನಗರ ಅಂಧೇರಿಯಲ್ಲಿ ರಾಜನ್‌ನ ವ್ಯಕ್ತಿಗಳಿಂದ ಗುಂಡೇಟಿಗೀಡಾಗಿ ಕೊಲ್ಲಲ್ಪಟ್ಟಿದ್ದರು. ಸೆಪ್ಟಂಬರ್ 12, 1992 ರಂದು ಇಲ್ಲಿನ ಜೆಜೆ ಆಸ್ಪತ್ರೆಯಲ್ಲಿ ಶೂಟೌಟ್ ನಡೆಸಿದ ತಂಡದಲ್ಲಿ ಶರ್ಮಾ ಭಾಗಿಯಾಗಿದ್ದರು ಎಂದು ಹೇಳಲಾಗಿದೆ. ದಾವೂದ್ ಗ್ಯಾಂಗ್ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯನನ್ನು ಕೊಲ್ಲಲು ಗುಂಡಿನ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ದಾವೂದ್ ಮತ್ತು ರಾಜನ್ ಗ್ಯಾಂಗ್ ನಡುವಿನ ಪೈಪೋಟಿಯಿಂದಾಗಿ ಶರ್ಮಾ ಕೊಲ್ಲಲ್ಪಟ್ಟರು ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಆದರೆ ನ್ಯಾಯಾಧೀಶರು, ತಮ್ಮ ಆದೇಶದಲ್ಲಿ, ಮಾಹಿತಿದಾರ (ದೂರುದಾರರು) ಹೇಳಿದ ಮಾತುಗಳನ್ನು ಹೊರತುಪಡಿಸಿ, ಈ ಅರ್ಜಿದಾರರ (ರಾಜನ್) ವಿರುದ್ಧ ಯಾವುದೇ ದೋಷಾರೋಪಣೆಯ ಸಾಕ್ಷ್ಯವನ್ನು ಪ್ರಾಸಿಕ್ಯೂಷನ್ ತರಲಿಲ್ಲ ಅಥವಾ ಸಂಗ್ರಹಿಸಲಿಲ್ಲ ಎಂದು ಗಮನಿಸಿದೆ. 

ಇದೇ ಆಧಾರದಲ್ಲಿ ಛೋಟಾರಾಜನ್ ನನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ ಎನ್ನಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT