ನಕಲಿ ಐಪಿಎಸ್ ವಿಕಾಸ್ ಗೌತಮ್ 
ದೇಶ

ಐಪಿಎಸ್‌ ಅಧಿಕಾರಿ ಎಂದು ಪೋಸ್‌ ನೀಡಿ ಮಹಿಳೆಯರ ವಂಚಿಸಿದ 8ನೇ ತರಗತಿ ಓದಿರುವ ಭೂಪ!

ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿ ಎಂದು ಪೋಸು ನೀಡಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ವಂಚಿಸಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನವದೆಹಲಿ: ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿ ಎಂದು ಪೋಸು ನೀಡಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ವಂಚಿಸಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಮಧ್ಯಪ್ರದೇಶ ಗ್ವಾಲಿಯರ್  ನಿವಾಸಿ ವಿಕಾಸ್ ಗೌತಮ್ ಎಂದು ಗುರುತಿಸಲಾಗಿದೆ.

ತಾನು ಕಾನ್ಪುರ್ ಐಐಟಿ ಪದವೀಧರ ಎಂದು ಹೇಳಿಕೊಂಡಿದ್ದ ವಿಕಾಸ್ ಐಪಿಎಸ್ ಅಧಿಕಾರಿ ಎಂದು ನಂಬಿಸಿದ್ದ. ದೆಹಲಿಯ ಮಹಿಳಾ ವೈದ್ಯರೊಬ್ಬರು ದಾಖಲಿಸಿದ ದೂರಿನ ಅನ್ವಯ ದೆಹಲಿ ಸೈಬರ್ ಸೆಲ್ ಅಧಿಕಾರಿಗಳು ವಿಕಾಸ್ ನನ್ನು ಬಂಧಿಸಿದ್ದಾರೆ.

ದೆಹಲಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಮಹಿಳೆಯೊಬ್ಬರನ್ನು ಸಹ ಈತ ವಂಚಿಸಿದ್ದಾನೆ. ಅವರು ಆನ್‌ಲೈನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದು, ಒಂದು ದಿನ, ಆಕೆಯ ನಂಬಿಕೆಯನ್ನು ಗಳಿಸಿಕೊಂಡಿದ್ದಾನೆ. ನಂತರ ವಿಕಾಸ್‌ ಎಂಬ ಹೆಸರಿನ ಈ ವ್ಯಕ್ತಿ ಮಹಿಳಾ ವೈದ್ಯೆಯಿಂದ ತೆಗೆದುಕೊಂಡ ವಿವರಗಳನ್ನು ಬಳಸಿ, ಆಕೆಯ ಬ್ಯಾಂಕ್ ಖಾತೆಯಿಂದ 25,000 ರೂ. ಪಡೆದಿದ್ದಾನೆ ಎಂದು ತಿಳಿದುಬಂದಿದೆ.

ಅಂತಿಮವಾಗಿ, ಅವನು ವಂಚಕನೆಂದು ಮಹಿಳಾ ವೈದ್ಯೆ ಕಂಡುಕೊಂಡಾಗ, ಆಕೆ ಪೊಲೀಸರ ಬಳಿ ಹೋಗಲು ನಿರ್ಧರಿಸಿದಳು. ಆದರೆ, ಈ ವೇಳೆ ನಕಲಿ ಐಪಿಎಸ್ ಅಧಿಕಾರಿ ತನಗೆ ರಾಜಕೀಯ ಸಂಪರ್ಕವಿದೆ ಎಂದು ಬೆದರಿಕೆ ಹಾಕಿದ್ದಾನೆ ಎಂದೂ ಪೊಲೀಸರು ತಿಳಿಸಿದ್ದಾರೆ.ಮಹಿಳಾ ವೈದ್ಯೆ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಪ್ರವೃತ್ತರಾಗಿದ್ದ ದೆಹಲಿ ಪೊಲೀಸರು ವಿಕಾಸ್ ನನ್ನು ಬಂಧಿಸಿದ್ದರು.

ಈತ ಐಪಿಎಸ್ ಅಧಿಕಾರಿ ಎಂಬಂತೆ ಬಿಂಬಿಸಿಕೊಳ್ಳಲು ನಕಲಿ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆ ತೆರೆದಿರುವುದು ತನಿಖೆಯಿಂದ ತಿಳಿದು ಬಂದಿದೆ. 8ನೇ ತರಗತಿ ಉತ್ತೀರ್ಣರಾದ ನಂತರ ವಿಕಾಸ್ ದೆಹಲಿಗೆ ವಲಸೆ ಬಂದು ಮುಖರ್ಜಿ ನಗರದ ಹೋಟೆಲ್ ವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ, ಇಲ್ಲಿಗೆ ಬರುತ್ತಿದ್ದ ಅಧಿಕಾರಿಗಳನ್ನು ಗಮನಿಸಿದ ನಂತರ ವಿಕಾಸ್ ತಾನು ಐಪಿಎಸ್ ಅಧಿಕಾರಿಯಂತೆ ಇರಬೇಕೆಂಬ ಪ್ಲ್ಯಾನ್ ಹಾಕಿಕೊಂಡು, ಅದರಂತೆ ಫೋಸು ಕೊಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ವಿಕಾಸ್ ಗೌತಮ್ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಎಂದು ದೆಹಲಿ ಪೊಲೀಸ್ ಅಧಿಕಾರಿ ಹರಿಂದರ್ ಸಿಂಗ್ ಹೇಳಿದ್ದು, ಆರೋಪಿ 8 ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೆಲ್ಡಿಂಗ್ ಕೋರ್ಸ್ ಮಾಡಿದ್ದಾರೆ. ಅಲ್ಲದೆ, ವಿಕಾಸ್ ಗೌತಮ್‌ಗೆ ಕ್ರಿಮಿನಲ್ ಇತಿಹಾಸವಿದೆ ಎಂದು ಪೊಲೀಸರು ಕಂಡುಕೊಂಡಿದ್ದು, ಆತ ಈ ಹಿಂದೆ ಉತ್ತರ ಪ್ರದೇಶ ಮತ್ತು ಗ್ವಾಲಿಯರ್‌ನಲ್ಲಿ ವಂಚನೆ ಆರೋಪದ ಮೇಲೆ ಜೈಲಿನಲ್ಲಿದ್ದ ಎಂಬುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT