ನಕಲಿ ಐಪಿಎಸ್ ವಿಕಾಸ್ ಗೌತಮ್ 
ದೇಶ

ಐಪಿಎಸ್‌ ಅಧಿಕಾರಿ ಎಂದು ಪೋಸ್‌ ನೀಡಿ ಮಹಿಳೆಯರ ವಂಚಿಸಿದ 8ನೇ ತರಗತಿ ಓದಿರುವ ಭೂಪ!

ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿ ಎಂದು ಪೋಸು ನೀಡಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ವಂಚಿಸಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ನವದೆಹಲಿ: ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿ ಎಂದು ಪೋಸು ನೀಡಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ವಂಚಿಸಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಮಧ್ಯಪ್ರದೇಶ ಗ್ವಾಲಿಯರ್  ನಿವಾಸಿ ವಿಕಾಸ್ ಗೌತಮ್ ಎಂದು ಗುರುತಿಸಲಾಗಿದೆ.

ತಾನು ಕಾನ್ಪುರ್ ಐಐಟಿ ಪದವೀಧರ ಎಂದು ಹೇಳಿಕೊಂಡಿದ್ದ ವಿಕಾಸ್ ಐಪಿಎಸ್ ಅಧಿಕಾರಿ ಎಂದು ನಂಬಿಸಿದ್ದ. ದೆಹಲಿಯ ಮಹಿಳಾ ವೈದ್ಯರೊಬ್ಬರು ದಾಖಲಿಸಿದ ದೂರಿನ ಅನ್ವಯ ದೆಹಲಿ ಸೈಬರ್ ಸೆಲ್ ಅಧಿಕಾರಿಗಳು ವಿಕಾಸ್ ನನ್ನು ಬಂಧಿಸಿದ್ದಾರೆ.

ದೆಹಲಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಮಹಿಳೆಯೊಬ್ಬರನ್ನು ಸಹ ಈತ ವಂಚಿಸಿದ್ದಾನೆ. ಅವರು ಆನ್‌ಲೈನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದು, ಒಂದು ದಿನ, ಆಕೆಯ ನಂಬಿಕೆಯನ್ನು ಗಳಿಸಿಕೊಂಡಿದ್ದಾನೆ. ನಂತರ ವಿಕಾಸ್‌ ಎಂಬ ಹೆಸರಿನ ಈ ವ್ಯಕ್ತಿ ಮಹಿಳಾ ವೈದ್ಯೆಯಿಂದ ತೆಗೆದುಕೊಂಡ ವಿವರಗಳನ್ನು ಬಳಸಿ, ಆಕೆಯ ಬ್ಯಾಂಕ್ ಖಾತೆಯಿಂದ 25,000 ರೂ. ಪಡೆದಿದ್ದಾನೆ ಎಂದು ತಿಳಿದುಬಂದಿದೆ.

ಅಂತಿಮವಾಗಿ, ಅವನು ವಂಚಕನೆಂದು ಮಹಿಳಾ ವೈದ್ಯೆ ಕಂಡುಕೊಂಡಾಗ, ಆಕೆ ಪೊಲೀಸರ ಬಳಿ ಹೋಗಲು ನಿರ್ಧರಿಸಿದಳು. ಆದರೆ, ಈ ವೇಳೆ ನಕಲಿ ಐಪಿಎಸ್ ಅಧಿಕಾರಿ ತನಗೆ ರಾಜಕೀಯ ಸಂಪರ್ಕವಿದೆ ಎಂದು ಬೆದರಿಕೆ ಹಾಕಿದ್ದಾನೆ ಎಂದೂ ಪೊಲೀಸರು ತಿಳಿಸಿದ್ದಾರೆ.ಮಹಿಳಾ ವೈದ್ಯೆ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಪ್ರವೃತ್ತರಾಗಿದ್ದ ದೆಹಲಿ ಪೊಲೀಸರು ವಿಕಾಸ್ ನನ್ನು ಬಂಧಿಸಿದ್ದರು.

ಈತ ಐಪಿಎಸ್ ಅಧಿಕಾರಿ ಎಂಬಂತೆ ಬಿಂಬಿಸಿಕೊಳ್ಳಲು ನಕಲಿ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆ ತೆರೆದಿರುವುದು ತನಿಖೆಯಿಂದ ತಿಳಿದು ಬಂದಿದೆ. 8ನೇ ತರಗತಿ ಉತ್ತೀರ್ಣರಾದ ನಂತರ ವಿಕಾಸ್ ದೆಹಲಿಗೆ ವಲಸೆ ಬಂದು ಮುಖರ್ಜಿ ನಗರದ ಹೋಟೆಲ್ ವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ, ಇಲ್ಲಿಗೆ ಬರುತ್ತಿದ್ದ ಅಧಿಕಾರಿಗಳನ್ನು ಗಮನಿಸಿದ ನಂತರ ವಿಕಾಸ್ ತಾನು ಐಪಿಎಸ್ ಅಧಿಕಾರಿಯಂತೆ ಇರಬೇಕೆಂಬ ಪ್ಲ್ಯಾನ್ ಹಾಕಿಕೊಂಡು, ಅದರಂತೆ ಫೋಸು ಕೊಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ವಿಕಾಸ್ ಗೌತಮ್ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಎಂದು ದೆಹಲಿ ಪೊಲೀಸ್ ಅಧಿಕಾರಿ ಹರಿಂದರ್ ಸಿಂಗ್ ಹೇಳಿದ್ದು, ಆರೋಪಿ 8 ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೆಲ್ಡಿಂಗ್ ಕೋರ್ಸ್ ಮಾಡಿದ್ದಾರೆ. ಅಲ್ಲದೆ, ವಿಕಾಸ್ ಗೌತಮ್‌ಗೆ ಕ್ರಿಮಿನಲ್ ಇತಿಹಾಸವಿದೆ ಎಂದು ಪೊಲೀಸರು ಕಂಡುಕೊಂಡಿದ್ದು, ಆತ ಈ ಹಿಂದೆ ಉತ್ತರ ಪ್ರದೇಶ ಮತ್ತು ಗ್ವಾಲಿಯರ್‌ನಲ್ಲಿ ವಂಚನೆ ಆರೋಪದ ಮೇಲೆ ಜೈಲಿನಲ್ಲಿದ್ದ ಎಂಬುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!