ಭೋಜನಕೂಟದಲ್ಲಿ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು 
ದೇಶ

ಸಂಸತ್ತಿನಲ್ಲಿ 'ನಾಯಿ' ವಿವಾದ ನಡುವೆ ಖರ್ಗೆ ಮತ್ತಿತರರೊಂದಿಗೆ ಸಿರಿಧಾನ್ಯ ಖಾದ್ಯ ಸವಿದ ಪ್ರಧಾನಿ ಮೋದಿ!

2023 ಸಿರಿ ಧಾನ್ಯ ವರ್ಷದ ಅಂಗವಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ  ತೋಮರ್ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಸವಿದರು.

ನವದೆಹಲಿ: 2023 ಸಿರಿ ಧಾನ್ಯ ವರ್ಷದ ಅಂಗವಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ  ತೋಮರ್ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಸವಿದರು.

ಮೋದಿ ಸುಮಾರು 40 ನಿಮಿಷಗಳ ಕಾಲ ಭೋಜನ ಕೂಟದಲ್ಲಿ ಪಾಲ್ಗೊಂಡರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಮತ್ತಿತರ ಸಂಸದರು ವಿಶೇಷವಾಗಿ ರಾಗಿ, ಸಜ್ಜೆ ಮತ್ತಿತರ ಸಿರಿಧಾನ್ಯಗಳಿಂದ ತಯಾರಿಸಲಾದ ವಿವಿಧ ಖಾದ್ಯಗಳ ರುಚಿಯನ್ನು ಆನಂದಿಸಿದರು.

ಈ ಕುರಿತ ಫೋಟೋಗಳನ್ನು  ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, 2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು  ಗುರುತಿಸಲು ತಯಾರಿ ನಡೆಸುತ್ತಿರುವಾಗ, ಸಂಸತ್ತಿನಲ್ಲಿ ಸಿರಿಧಾನ್ಯಗಳಿಂದ ಮಾಡಿದ ಭೋಜನಕೂಟದಲ್ಲಿ ಭಾಗವಹಿಸಿದ್ದೇವೆ. ಪಕ್ಷಾತೀತವಾಗಿ ಇಂತಹ ಕೂಟದಲ್ಲಿ ಭಾಗವಹಿಸಿದ್ದಕ್ಕೆ ತುಂಬಾ  ಸಂತೋಷವಾಗಿದೆ ಎಂದು ಹೇಳಿದ್ದಾರೆ. 

ರಾಜಸ್ಥಾನದ ಅಲ್ವಾರ್ ನಲ್ಲಿ ಖರ್ಗೆ ಮಾಡಿದ ಟೀಕೆಗಳ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಪರಸ್ಪರ ಕಿಡಿಕಾರಿದ ನಂತರ ನಡೆದ ಭೋಜನಕೂಟ ತೀವ್ರ ಕುತೂಹಲ ಮೂಡಿಸಿತು.

ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು "ನಾಯಿಯನ್ನು ಸಹ ಕಳೆದುಕೊಂಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಸತ್ತಿನಲ್ಲಿ ಮಂಗಳವಾರ ತೀವ್ರ ಗದ್ದಲವನ್ನು ಸೃಷ್ಟಿಸಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT