ಸಂಗ್ರಹ ಚಿತ್ರ 
ದೇಶ

ಚೀನಾ, ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ಆರ್ಭಟ: ಭಾರತದಲ್ಲೂ ಶುರುವಾದ ಆತಂಕ, ಆರೋಗ್ಯ ಸಚಿವಾಲಯದಿಂದ ಇಂದು ಸಭೆ

ಅಮೆರಿಕಾ, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಕೊರಿಯಾದಲ್ಲಿ ಮಹಾಮಾರಿ ಕೊರೋನಾ ಉಲ್ಬಣಗೊಂಡಿದ್ದು, ಈ ಬೆಳವಣಿಗೆಯು ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಪರಿಶೀಲಿಸಲು ಆರೋಗ್ಯ ಸಚಿವಾಲಯವು ಬುಧವಾರ ಸಭೆ ನಡೆಸುತ್ತಿದೆ.

ನವದೆಹಲಿ: ಅಮೆರಿಕಾ, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಕೊರಿಯಾದಲ್ಲಿ ಮಹಾಮಾರಿ ಕೊರೋನಾ ಉಲ್ಬಣಗೊಂಡಿದ್ದು, ಈ ಬೆಳವಣಿಗೆಯು ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಪರಿಶೀಲಿಸಲು ಆರೋಗ್ಯ ಸಚಿವಾಲಯವು ಬುಧವಾರ ಸಭೆ ನಡೆಸುತ್ತಿದೆ.

ನಿನ್ನೆಯಷ್ಟೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಸಕಾರಾತ್ಮಕ ಮಾದರಿಗಳ ಜೀನೋಮ್ ಅನುಕ್ರಮ ಪ್ರಕ್ರಿಯೆಯನ್ನು ಬಲಪಡಿಸಲು ಮತ್ತು ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಗಳನ್ನು ನೀಡಿದ್ದರು.

ಅದಾಗ್ಯೂ ಅಂತರಾಷ್ಟ್ರೀಯ ಪರಿಸ್ಥಿತಿಗಳನ್ನು ಚರ್ಚಿಸಲು ಮನ್ಸುಖ್ ಮಾಂಡವಿಯಾ ಅವರು, ಬುಧವಾರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಇಂತಹ ಕ್ರಮಗಳು ದೇಶದಲ್ಲಿ ಪತ್ತೆಯಾಗುವ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ನಿಯಂತ್ರಿಸಲು ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಕೋವಿಡ್-ಸೂಕ್ತ ನಡವಳಿಕೆ ಕಾರ್ಯತಂತ್ರದ ಮೇಲೆ ಭಾರತ ತನ್ನ ಗಮನವನ್ನು ಕೇಂದ್ರೀಕರಿಸಿದ್ದು, ಕೊರೋನಾ ವೈರಸ್ ಹರಡುವಿಕೆಯನ್ನು ನಿರ್ಬಂಧಿಸಲು ಸಮರ್ಥವಾಗಿದೆ. ದೇಶದಲ್ಲಿ ಪ್ರಸ್ತುತ 1,200 ಪ್ರಕರಣಗಳು ವರದಿಯಾಗುತ್ತಿವೆ. ಕೋವಿಡ್ ನ ಸಾರ್ವಜನಿಕ ಆರೋಗ್ಯ ಸವಾಲು ಪ್ರಪಂಚದಾದ್ಯಂತ ಇನ್ನೂ ಮುಂದುವರೆದಿದೆ ಮತ್ತು ವಾರಕ್ಕೆ ಸುಮಾರು 35 ಲಕ್ಷ ಪ್ರಕರಣಗಳು ವರದಿಯಾಗುತ್ತವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT