ಸಾಂದರ್ಭಿಕ ಚಿತ್ರ 
ದೇಶ

ನಕಲಿ ಎನ್‌ಕೌಂಟರ್‌: ಉತ್ತರ ಪ್ರದೇಶದ ಒಂಬತ್ತು ಪೊಲೀಸರಿಗೆ ಜೀವಾವಧಿ ಶಿಕ್ಷೆ

16 ವರ್ಷಗಳ ಹಿಂದೆ ಉತ್ತರ ಪ್ರದೇಶದ ಇಟಾಹ್‌ನಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್‌ ವಿಶೇಷ ಸಿಬಿಐ ಕೋರ್ಟ್ ಅಂದಿನ ಪೊಲೀಸ್ ಠಾಣಾಧಿಕಾರಿ ಸೇರಿದಂತೆ ಒಂಬತ್ತು ಪೊಲೀಸರು ತಪ್ಪಿತಸ್ಥರು...

ಗಾಜಿಯಾಬಾದ್‌: 16 ವರ್ಷಗಳ ಹಿಂದೆ ಉತ್ತರ ಪ್ರದೇಶದ ಇಟಾಹ್‌ನಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್‌ ವಿಶೇಷ ಸಿಬಿಐ ಕೋರ್ಟ್ ಅಂದಿನ ಪೊಲೀಸ್ ಠಾಣಾಧಿಕಾರಿ ಸೇರಿದಂತೆ ಒಂಬತ್ತು ಪೊಲೀಸರು ತಪ್ಪಿತಸ್ಥರು ಎಂದು ಮಂಗಳವಾರ ತೀರ್ಪು ನೀಡಿದೆ.

ಮಾಜಿ ಠಾಣಾಧಿಕಾರಿ ಪವನ್ ಸಿಂಗ್, ಪಾಲ್ ಸಿಂಗ್ ತೇನ್ವಾ, ರಾಜೇಂದ್ರ ಪ್ರಸಾದ್, ಸರ್ನಾಮ್ ಸಿಂಗ್ ಮತ್ತು ಮೊಹ್ಕಮ್ ಸಿಂಗ್ ಸೇರಿದಂತೆ ಎಲ್ಲಾ ಒಂಬತ್ತು ಅಪರಾಧಿಗಳಿಗೆ ಸಿಬಿಐ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಲ್ಲದೆ ನ್ಯಾಯಾಲಯವು ಪ್ರತಿಯೊಬ್ಬ ಅಪರಾಧಿಗೂ 30,000 ರೂಪಾಯಿ ದಂಡ ವಿಧಿಸಿದೆ.

ಇತರ ಅಪರಾಧಿಗಳಾದ ಬಲದೇವ್ ಪ್ರಸಾದ್, ಸುಮೇರ್ ಸಿಂಗ್, ಅಜಯ್ ಕುಮಾರ್ ಮತ್ತು ಅವಧೇಶ್ ರಾವತ್ ಅವರಿಗೆ ಐಪಿಸಿ ಸೆಕ್ಷನ್ 34ರ ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಸಾಕ್ಷ್ಯ ನಾಶಪಡಿಸಿದ ಆರೋಪದಲ್ಲಿ 5 ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 11 ಸಾವಿರ ರೂಪಾಯಿ ದಂಡ ವಿಧಿಸಿದೆ. 

2006ರ ಆಗಸ್ಟ್ 18ರಂದು ನಡೆದ ಎನ್‌ಕೌಂಟರ್‌ನಲ್ಲಿ ಸುನೆಹ್ರಾ ಗ್ರಾಮದ ನಿವಾಸಿ ರಾಜಾರಾಂ ಎಂಬ ಕಾರ್ಪೆಂಟರ್ ನನ್ನು ಹತ್ಯೆ ಮಾಡಲಾಗಿತ್ತು.

ಸಿಧ್‌ಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪೊಲೀಸರು ರಾಜಾರಾಂನನ್ನು ಡಕಾಯಿತನಂತೆ ಬಿಂಬಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದರು.

ನಂತರ ರಾಜಾರಾಮ್ ಅವರ ಪತ್ನಿ ಸಂತೋಷ್ ಕುಮಾರಿ ಅವರು ತನ್ನ ಪತಿ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಬೇಕೆಂದು ಅಲಹಾಬಾದ್ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಮನವಿ ಪರಿಗಣಿಸಿದ ಹೈಕೋರ್ಟ್ 2007ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT