ಜಗದೀಶ್ ಠಾಕೂರ್ 
ದೇಶ

ಗುಜರಾತ್ ರಾಜ್ಯಾಧ್ಯಕ್ಷರ ರಾಜೀನಾಮೆಗೆ 16ಕ್ಕೂ ಹೆಚ್ಚು ಪರಾಜಿತ ಕಾಂಗ್ರೆಸ್ ಶಾಸಕರ ಒತ್ತಾಯ!

2022ರ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಸೋಲು ಅನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ 16ಕ್ಕೂ ಹೆಚ್ಚು ಪರಾಜಿತ ಶಾಸಕರು ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಅಹಮದಾಬಾದ್: 2022ರ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಸೋಲು ಅನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ 16ಕ್ಕೂ ಹೆಚ್ಚು ಪರಾಜಿತ ಶಾಸಕರು ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ನಿಮಿತ್ತ ನಡೆದ ಸಭೆಯಲ್ಲಿ ಹಲವು ಹಿರಿಯ ಕಾಂಗ್ರೆಸ್ ನಾಯಕರು ರಾಜ್ಯಾಧ್ಯಕ್ಷರ ರಾಜೀನಾಮೆಯ ನಂತರವೇ ಪಕ್ಷಕ್ಕಾಗಿ ದುಡಿಯುವುದಾಗಿ ಹೇಳಿದ್ದಾರೆ. ಗುಜರಾತ್ ಕಾಂಗ್ರೆಸ್ ನಾಯಕರು ಡಿಸೆಂಬರ್ 23ರಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಭೇಟಿ ಮಾಡಿ ಗುಜರಾತ್ ಸೋಲಿನ ವರದಿಯನ್ನು ನೀಡಲಿದ್ದಾರೆ.

ಅದೇ ದಿನ ಗುಜರಾತ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ರಾಜೀನಾಮೆಯನ್ನು ದೆಹಲಿ ಹೈಕಮಾಂಡ್‌ಗೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೀಶ್ ಠಾಕೂರ್ ಅವರು ಬುಧವಾರ ಕರೆದಿದ್ದ ಸಭೆಯಲ್ಲಿ ಪಕ್ಷದ ನಾಯಕರು ಸೋಲಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ತಾಲೂಕುಗಳನ್ನು ಒಳಗೊಂಡಂತೆ ಫೆಬ್ರವರಿಯಿಂದ ಪಾದ ಯಾತ್ರೆ ನಡೆಸಲು ಯೋಜಿಸಲು ಪಕ್ಷವು ಸಭೆ ಕರೆದಿತ್ತು. ಸಭೆಯಲ್ಲಿ 16ಕ್ಕೂ ಹೆಚ್ಚು ಶಾಸಕರು, ಜಿಲ್ಲಾ ಮತ್ತು ನಗರಾಧ್ಯಕ್ಷರು ಪಕ್ಷದ ಪದಾಧಿಕಾರಿಗಳ ವಿರುದ್ಧ ವಿಶೇಷವಾಗಿ ಪಕ್ಷದ ಅಧ್ಯಕ್ಷ ಜಗದೀಶ್ ಠಾಕೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT