ಚೆನ್ನೈ ರೈಲು ನಿಲ್ದಾಣದ ಮುಂಭಾಗದಲ್ಲಿ ಮಾಸ್ಕ್ ಇಲ್ಲದೇ ಪ್ರವೇಶವಿಲ್ಲ ಎಂಬ ಸಂದೇಶದ ಚಿತ್ರವನ್ನು ರಚಿಸುತ್ತಿರುವ ಕಲಾವಿದ (ಸಂಗ್ರಹ ಚಿತ್ರ) 
ದೇಶ

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸಂಸದರು ಮಾಸ್ಕ್ ಧರಿಸುವಂತೆ ಹೇಳಿದ ಸ್ಪೀಕರ್, ಸಭಾಪತಿ

ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುರುವಾರ ಸಂಸದರಿಗೆ ಮಾಸ್ಕ್ ಧರಿಸಲು ಮತ್ತು ಕೋವಿಡ್ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ನೀಡಿದ್ದಾರೆ.

ನವದೆಹಲಿ: ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಸಂಸದರಿಗೆ ಮಾಸ್ಕ್ ಧರಿಸಲು ಮತ್ತು ಕೋವಿಡ್ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ನೀಡಿದ್ದಾರೆ.

ಬಿರ್ಲಾ ಅವರು ಸ್ವತಃ ಮಾಸ್ಕ್ ಧರಿಸಿ ಸದನಕ್ಕೆ ಬಂದರು ಮತ್ತು ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೊಮ್ಮೆ ಹೆಚ್ಚಾಗುತ್ತಿವೆ ಎಂದು ಹೇಳಿದರು.

ಸರ್ಕಾರವು ತ್ವರಿತ ಕ್ರಮಗಳನ್ನು ಕೈಗೊಂಡಿದೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಮತ್ತು ಕೋವಿಡ್ ಸಂಬಂಧಿತ ನಿಯಮಾವಳಿಗಳನ್ನು ಅನುಸರಿಸಲು ಜನರನ್ನು ಕೇಳಿದೆ. ಸಾಂಕ್ರಾಮಿಕ ರೋಗದ ಹಿಂದಿನ ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಜಾಗರೂಕರಾಗಿರಬೇಕು. ಲೋಕಸಭೆಯ ಚೇಂಬರ್‌ನ ಪ್ರವೇಶ ದ್ವಾರಗಳಲ್ಲಿ ಸಂಸದರಿಗೆ ಮಾಸ್ಕ್‌ಗಳನ್ನು ಲಭ್ಯಗೊಳಿಸಲಾಗಿದೆ ಮತ್ತು ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಅವರು ಸದಸ್ಯರಿಗೆ ಹೇಳಿದರು.

ಲಸಿಕೆ ಹಾಕಿಸಿಕೊಳ್ಳಲು ಮತ್ತು ಮಾಸ್ಕ್ ಧರಿಸುವಂತೆ ಸರ್ಕಾರ ಬುಧವಾರ ಜನರಿಗೆ ಸಲಹೆ ನೀಡಿದೆ. ಚೀನಾ ಮತ್ತು ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಯಾದೃಚ್ಛಿಕ ಮಾದರಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅದು ಹೇಳಿದೆ.

ರಾಜ್ಯಸಭೆಯಲ್ಲೂ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ಸಭಾಪತಿ

ವಿಶ್ವದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಂಸದರು ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಅಭ್ಯಾಸ ಮಾಡಬೇಕು. ಸದನವು ರಾಷ್ಟ್ರವನ್ನು ಉದಾಹರಣೆಯಾಗಿ ಮುನ್ನಡೆಸುವ ಅಗತ್ಯವಿದೆ ಎಂದು ರಾಜ್ಯಸಭೆ ಸಭಾಪತಿ ಮತ್ತು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಗುರುವಾರ ಹೇಳಿದ್ದಾರೆ.

ಸದನವು ಆರಂಭಗೊಂಡಾಗ, ಅವರು ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಉಲ್ಲೇಖಿಸಿದರು. ಪ್ರಪಂಚದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಲು ನಾನು ಎಲ್ಲ ಸದಸ್ಯರನ್ನು ಕೋರುತ್ತೇನೆ ಎಂದರು.

ನಮ್ಮ ದೇಶವಾಸಿಗಳ ಮುಂದೆ ಒಂದು ಉದಾಹರಣಯಾಗಿ ನಿಲ್ಲುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆಡಳಿತ, ವೈದ್ಯರು, ಆರೋಗ್ಯ ವೃತ್ತಿಪರರು ಮತ್ತು ನೈರ್ಮಲ್ಯ ಕಾರ್ಯಕರ್ತರ ಸಂಘಟಿತ ಪ್ರಯತ್ನಗಳಿಂದ ಹಿಂದೆ ಕೋವಿಡ್-19 ರ ಸವಾಲುಗಳನ್ನು ಜಯಿಸಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT