ಕುದುರೆ ಸವಾರಿಯೊಂದಿಗೆ ಬ್ಯಾಚುಲರ್ ಗಳ ಮೆರವಣಿಗೆ ಚಿತ್ರ 
ದೇಶ

ಮದುವೆಯಾಗಲು ಹೆಣ್ಣು ಬೇಕು: 'ಬ್ಯಾ೦ಡ್ ಬಾಜಾ ಬರಾತ್' ನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ 50 ಬ್ಯಾಚುಲರ್‌ಗಳ ಮೆರವಣಿಗೆ

ಮಹಾರಾಷ್ಟ್ರದಲ್ಲಿ ಪುರುಷ- ಮಹಿಳೆಯರ ಅನುಪಾತ ಕುಸಿತ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಧು ಹುಡುಕಿಕೊಡಿ ಎಂದು 50ಕ್ಕೂ ಹೆಚ್ಚು ಅರ್ಹ ಬ್ಯಾಚುಲರ್ ಗಳು, ಮದು ಮಗನ ಗೆಟಾಪ್ ನಲ್ಲಿ ಕುದುರೆ ಸವಾರಿ, 'ಬ್ಯಾ೦ಡ್ ಬಾಜಾ ಬರಾತ್ ನೊಂದಿಗೆ  ಸೊಲ್ಲಾಪುರ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಸಾಗಿದರು.  

ಪುಣೆ: ಮಹಾರಾಷ್ಟ್ರದಲ್ಲಿ ಪುರುಷ- ಮಹಿಳೆಯರ ಅನುಪಾತ ಕುಸಿತ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಧು ಹುಡುಕಿಕೊಡಿ ಎಂದು 50ಕ್ಕೂ ಹೆಚ್ಚು ಅರ್ಹ ಬ್ಯಾಚುಲರ್ ಗಳು, ಮದು ಮಗನ ಗೆಟಾಪ್ ನಲ್ಲಿ ಕುದುರೆ ಸವಾರಿ, 'ಬ್ಯಾ೦ಡ್ ಬಾಜಾ ಬರಾತ್ ನೊಂದಿಗೆ  ಸೊಲ್ಲಾಪುರ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಸಾಗಿದ್ದಾರೆ.  

ನಂತರ, ರಾಜ್ಯದಲ್ಲಿ ಪುರುಷ-ಮಹಿಳಾ ಅನುಪಾತ ಸರಿಪಡಿಸಲು ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ವ ವರ್ಗೀಕರಣ ತಂತ್ರಗಳು (ಪಿಸಿಪಿಎನ್ ಡಿಟಿ) ಕಾಯ್ದೆಯನ್ನು ಸೂಕ್ತ ರೀತಿಯಲ್ಲಿ ಜಾರಿಗೆ ತರುವಂತೆ ಮನವಿ ಸಲ್ಲಿಸಿದರು. ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇ( 2019-21) ಪ್ರಕಾರ, ಮಹಾರಾಷ್ಟ್ರದಲ್ಲಿ ಪ್ರತಿ 1,000 ಪುರುಷರಿಗೆ 920 ಮಹಿಳೆಯರಿದ್ದಾರೆ. 

ಮದುವೆ ವಿಚಾರ ಪ್ರಸ್ತಾಪವಾದಗಲೆಲ್ಲಾ, ಹುಡುಗಿ ಕೇಳುವ ಮೊದಲ ಪ್ರಶ್ನೆ, ನಗರದಲ್ಲಿ ವಾಸಿಸುತ್ತಿದ್ದೀರಾ, ಉದ್ಯೋಗವಿದೆಯೇ ಇಲ್ಲವೇ ಎಂದು ಕೇಳುತ್ತಿರುವುದಾಗಿ 29 ವರ್ಷದ ಶಿಲಾವಂತ್ ಕ್ಷೀರಸಾಗರ ಹೇಳಿದರು. ಇವರು ಕೂಡಾ ವಧು ಹುಡುಕುತ್ತಿರುವ ಬ್ಯಾಚುಲರ್ ಗಳಲ್ಲಿ ಒಬ್ಬರಾಗಿದ್ದಾರೆ.

ಟೈಲರಿಂಗ್ ವೃತ್ತಿ ಮಾಡುತ್ತಿರುವ 27 ವರ್ಷದ ಔದುಂಬರ್ ಮಾಲಿ ಅವರ ಸಮಸ್ಯೆಯೂ ಇದೇ ಆಗಿದೆ. ಇಲ್ಲಿಯವರೆಗೂ 8 ಹುಡುಗಿಯನ್ನು ನೋಡಲಾಗಿದೆ. ಹುಡುಗಿ ಕುಟುಂಬದವರ ಒಂದೇ ಪ್ರಶ್ನೆ ಏನೆಂದರೆ ಸರಿಯಾದ ಉದ್ಯೋಗವಿದೆಯೇ ಅಥವಾ ಇಲ್ಲವೇ ಎಂಬುದಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಅರ್ಹ ಬ್ಯಾಚುಲರ್ ಗಳಿಗೆ ವಧು ಸಿಗುತ್ತಿಲ್ಲ, ಪಿಸಿಪಿಎನ್ ಡಿಟಿ ಕಾಯ್ದೆ ಸರಿಯಾಗಿ ಅನುಷ್ಟಾನವಾದರೆ ವಧುವಿನ ಸಮಸ್ಯೆ ಸ್ವಲ್ಪ ಸುಧಾರಿಸಬಹುದೇನೂ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮ ಆಯೋಜಕ ಜ್ಯೋತಿ ಕ್ರಾಂತಿ ಪರಿಷತ್ ಸ್ಥಾಪಕ ರಮೇಶ್ ಭಾರಸ್ಕರ್ ಮಾತನಾಡಿ, ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಸಮಸ್ಯೆಯಿಂದಾಗಿ ಪುರುಷ- ಮಹಿಳೆಯರ ಅನುಪಾತದಲ್ಲಿ ಕುಸಿತವಾಗಿದ್ದು, ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT