ಮನ್ಸುಖ್ ಮಾಂಡವಿಯಾ 
ದೇಶ

ಕೋವಿಡ್ ಹೊಸ ರೂಪಾಂತರಿ ಮೇಲೆ ಕಣ್ಗಾವಲು: ಸಂಸತ್ತಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ!

ದೇಶದಲ್ಲಿ ಮತ್ತೊಮ್ಮೆ ಕೊರೋನಾ ವೈರಸ್ ಭೀತಿ ಎದುರಾಗಿದೆ. ಇದಕ್ಕಾಗಿ ಸರ್ಕಾರ ಎಲ್ಲ ಕ್ಷೇತ್ರದಲ್ಲೂ ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರ ಕಣ್ಗಾವಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೊರೊನಾ ಬಗ್ಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದರು.

ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಕೊರೋನಾ ವೈರಸ್ ಭೀತಿ ಎದುರಾಗಿದೆ. ಇದಕ್ಕಾಗಿ ಸರ್ಕಾರ ಎಲ್ಲ ಕ್ಷೇತ್ರದಲ್ಲೂ ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರ ಕಣ್ಗಾವಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೊರೊನಾ ಬಗ್ಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದರು.

ದೇಶದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ನಿರಂತರ ಇಳಿಕೆ ಕಂಡುಬಂದಿದೆ. ಆದರೆ ಈ ಮಧ್ಯೆ ಎಚ್ಚರಿಕೆಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಜನರು ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಸಲು ಪ್ರಾರಂಭಿಸಬೇಕು ಎಂದು ಮಾಂಡವಿಯಾ ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ಪ್ರಕರಣಗಳು ತೀರಾ ಕಡಿಮೆ ಇದೆ
ಆರೋಗ್ಯ ಸಚಿವರು ತಮ್ಮ ಭಾಷಣದಲ್ಲಿ ಕೊರೊನಾ ನಿರಂತರವಾಗಿ ಜಗತ್ತನ್ನು ಬಾಧಿಸುತ್ತಿದೆ. ಕೊರೋನಾ ಎಲ್ಲಾ ದೇಶಗಳ ಮೇಲೆ ಪರಿಣಾಮ ಬೀರಿದೆ. ಕಳೆದ ಕೆಲವು ದಿನಗಳಿಂದ ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಭಾರತದಲ್ಲಿ ಪ್ರಕರಣಗಳು ನಿರಂತರವಾಗಿ ಕಡಿಮೆಯಾಗುತ್ತಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 153 ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ಇಡೀ ವಿಶ್ವದಲ್ಲಿ ಪ್ರತಿದಿನ 5 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಜಪಾನ್, ಚೀನಾ, ದಕ್ಷಿಣ ಕೊರಿಯಾ, ಅಮೆರಿಕಾ, ಫ್ರಾನ್ಸ್ ಮತ್ತು ಇಟಲಿಯಂತಹ ದೇಶಗಳಲ್ಲಿ ಸಾವುಗಳು ಮತ್ತು ಹೊಸ ಕೊರೋನಾ ಪ್ರಕರಣಗಳು ಕಂಡುಬರುತ್ತಿವೆ ಎಂದರು.

ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ
ಕೊರೋನಾ ಕುರಿತು ಹೆಚ್ಚಿನ ಮಾಹಿತಿ ನೀಡಿದ ಮನ್ಸುಖ್ ಮಾಂಡವಿಯಾ, ಭಾರತದಲ್ಲಿ 220 ಕೋಟಿ ಲಸಿಕೆಗಳನ್ನು ನೀಡಲಾಗಿದೆ. ಆರೋಗ್ಯ ಸಚಿವಾಲಯ ಜಾಗತಿಕ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ. ಎದುರಾಗುವ ಸವಾಲುಗಳನ್ನು ಎದುರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಇದಕ್ಕಾಗಿ ರಾಜ್ಯಗಳಿಗೂ ಸಲಹೆ ನೀಡಲಾಗುತ್ತಿದೆ. ಜೀನೋಮ್ ಅನುಕ್ರಮಕ್ಕಾಗಿ ರಾಜ್ಯಗಳಿಗೆ ಸಲಹೆ ನೀಡಲಾಗಿದೆ. ಆದ್ದರಿಂದ ದೇಶದಲ್ಲಿ ಯಾವುದೇ ಹೊಸ ರೂಪಾಂತರಿ ಕಂಡು ಬಂದರೆ, ಅದನ್ನು ಸಮಯಕ್ಕೆ ಗುರುತಿಸಿದ ನಂತರ ಕ್ರಮಗಳನ್ನು ತೆಗೆದುಕೊಳ್ಳಬಹುದು. ಮುಂಬರುವ ಹಬ್ಬ ಮತ್ತು ಹೊಸ ವರ್ಷವನ್ನು ಗಮನದಲ್ಲಿಟ್ಟುಕೊಂಡು ರಾಜ್ಯಗಳು ಜಾಗರೂಕರಾಗಿರಬೇಕು. ಅಲ್ಲದೆ ಜನರು ಮಾಸ್ಕ್ ಧರಿಸಲು, ಸ್ಯಾನಿಟೈಜರ್‌ ಬಳಸಲು, ನೈರ್ಮಲ್ಯದ ಕಾಳಜಿ ವಹಿಸಲು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಜಾಗೃತಿ ಮೂಡಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು. 

ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ: ಆರೋಗ್ಯ ಸಚಿವರು
ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಬರುವ ಪ್ರಯಾಣಿಕರ ಯಾದೃಚ್ಛಿಕ ಮಾದರಿ ಸಂಗ್ರಹಿಸಲು ಪ್ರಾರಂಭಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು. ಕೊರೋನಾ ಮಹಾಮಾರಿ ಇನ್ನೂ ಮುಗಿದಿಲ್ಲ ಎಂಬುದನ್ನು ಜನತೆಗೆ ವಿವರಿಸುವ ಅಗತ್ಯವಿದೆ. ನಾವು ಕೊರೋನಾ ಲಸಿಕೆಯ ಬೂಸ್ಟರ್ ಡೋಸ್ ಅನ್ನು ಹಾಕಿಸಿಕೊಳ್ಳಬೇಕು ಮತ್ತು ಎಚ್ಚರವಾಗಿರಬೇಕು. ಕೊರೋನಾ ವಿರುದ್ಧದ ಹೋರಾಟವನ್ನು ಒಟ್ಟಾಗಿ ಮುಂದುವರಿಸುವ ಅಗತ್ಯವಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT