ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ 
ದೇಶ

ಸಂಜಯ್ ರಾವತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ: ಸಿಎಂ ಬೊಮ್ಮಾಯಿ

ಶಿವಸೇನೆ(ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅವರನ್ನು ದೇಶದ್ರೋಹಿ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಚೋದನಕಾರಿ ಹೇಳಿಕೆ ನೀಡಿದ ಸೇನಾ ನಾಯಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ...

ಬೆಳಗಾವಿ: ಶಿವಸೇನೆ(ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅವರನ್ನು ದೇಶದ್ರೋಹಿ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಚೋದನಕಾರಿ ಹೇಳಿಕೆ ನೀಡಿದ ಸೇನಾ ನಾಯಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಗುರುವಾರ ಹೇಳಿದ್ದಾರೆ.

ಚೀನಾ ಭಾರತದ ಗಡಿ ಪ್ರವೇಶಿಸಿದಂತೆ ನಾನು ಕರ್ನಾಟಕಕ್ಕೆ ಪ್ರವೇಶಿಸುತ್ತೇನೆ ಎಂದಿದ್ದ ರಾವತ್ ವಿರುದ್ಧ ತೀವ್ರ  ಆಕ್ರೋಶ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ, ಪ್ರಚೋದನಕಾರಿ ಹೇಳಿಕೆಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಇಂದು ವಿಧಾನಸಭೆಯಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿರುದ್ಧ ಖಂಡನಾ ನಿರ್ಣಯ ಮಂಡಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, "ನಾನು ರಾವತ್ ಅವರನ್ನು ಚೀನಾ ಏಜೆಂಟ್ ಎಂದು ಕರೆಯುತ್ತೇನೆ, ಸಂಜಯ್ ರಾವತ್ ಚೀನಾ ಏಜೆಂಟ್, ಅವರು ದೇಶದ್ರೋಹಿ, ಸಂಜಯ್ ರಾವತ್ ಒಬ್ಬ ದೇಶ ದ್ರೋಹಿ, ಈ ಒಕ್ಕೂಟ ವ್ಯವಸ್ಥೆಯಲ್ಲಿ ಯಾರಾದರೂ ಅಕ್ರಮವಾಗಿ ಬೇರೆ ರಾಜ್ಯಕ್ಕೆ ಪ್ರವೇಶಿಸುತ್ತೇನೆ ಎಂದು ಹೇಳಿದರೆ ಅದು ಒಕ್ಕೂಟ ವ್ಯವಸ್ಥೆ ನಾಶಪಡಿಸುವ ಪ್ರಯತ್ನ" ಎಂದಿದ್ದಾರೆ.

ನೀವು ಚೀನಾದಂತೆ ನಮ್ಮ ರಾಜ್ಯ ಪ್ರವೇಶಿಸಿದರೆ ನಾವು ಭಾರತೀಯ ಸೈನಿಕರಂತೆ ನಿಮ್ಮ ಮೇಲೆ ಪ್ರತಿದಾಳಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿರುಗೇಟು ನೀಡಿದರು.

ಕರ್ನಾಟಕದ ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು ಖಂಡನಾ ನಿರ್ಣಯದ ಮೂಲಕ ರಾಜ್ಯ ಸರ್ಕಾರ ತನ್ನ ಬದ್ದತೆಯನ್ನು ಪ್ರದರ್ಶಿಸಿದೆ. ಇತ್ತೀಚೆಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

'ಕರ್ಮ ರಿಟರ್ನ್ಸ್': 'The Kerala Files' ವಿರೋಧಿಸಿದ್ದ CPM ನಾಯಕನಿಗೂ ತಟ್ಟಿದ love Jihad ಬಿಸಿ, ಪುತ್ರಿಯ video ವೈರಲ್!

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

SCROLL FOR NEXT