ಸುಪ್ರೀಂ ಕೋರ್ಟ್ 
ದೇಶ

ಒಬಿಸಿಗಳ ಜಾತಿ ಆಧಾರಿತ ಜನಗಣತಿ; ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ ಕೋರ್ಟ್

ಮುಂಬರುವ ಜನಗಣತಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಆಧಾರಿತ ಜನಗಣತಿಯನ್ನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ನವದೆಹಲಿ: ಮುಂಬರುವ ಜನಗಣತಿಯಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಜಾತಿ ಆಧಾರಿತ ಜನಗಣತಿಯನ್ನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಒಬಿಸಿಗಳ ಜಾತಿ ಆಧಾರಿತ ಜನಗಣತಿ ಇಲ್ಲದಿರುವುದರಿಂದ ಸರ್ಕಾರವು ಅವರಿಗೆ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ವಿಸ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರುವ ಅರ್ಜಿಗೆ ಸಂಬಂಧಿಸಿದಂತೆ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ಪೀಠವು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ನಿರ್ದಿಷ್ಟ ಮಾಹಿತಿಯ ಅನುಪಸ್ಥಿತಿಯಲ್ಲಿ ಕಾಂಕ್ರೀಟ್ ನೀತಿಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದು ವಕೀಲ ಕೃಷ್ಣ ಕನ್ಹಯ್ಯಾ ಪಾಲ್ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಲಾಗಿದೆ.

2021ರ ಜನಗಣತಿಯ ಸಮಯದಲ್ಲಿ ಒಬಿಸಿಗಳ ಜನಗಣತಿಯನ್ನು ನಡೆಸಲಾಗುವುದು ಎಂದು ಆಗಿನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದರೂ, ಸರ್ಕಾರವು ಅದನ್ನು ರೋಹಿಣಿ ಆಯೋಗದ ಮುಂದೆ ಮಂಡಿಸುವುದರಿಂದ ದೂರ ಉಳಿದಿತ್ತು.

ದೆಹಲಿ ಹೈಕೋರ್ಟ್ ಮಾಜಿ ನ್ಯಾಯಾಧೀಶರಾದ ಜಿ ರೋಹಿಣಿ ನೇತೃತ್ವದ ಸಮಿತಿಯನ್ನು 2017 ರಲ್ಲಿ ಮೀಸಲಾತಿಯ ಪ್ರಯೋಜನಗಳು ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಒಬಿಸಿ ಸಮುದಾಯಗಳನ್ನು ಉಪವರ್ಗೀಕರಿಸಲು ಸ್ಥಾಪಿಸಲಾಯಿತು.

ಜಾತಿ ಜನಗಮತಿಯ ವಿರೋಧಿಗಳಿಗೆ ಯಾವುದೇ ಹೊಸ ವಾದದ ಕೊರತೆಯಿದೆ. ಅವರು ಅದೇ ಭಯದ ಮನೋವಿಕಾರವನ್ನು ಪುನರಾವರ್ತಿಸುತ್ತಿದ್ದಾರೆ. ಅದು ಜಾತೀಯತೆಯನ್ನು ಬೆಳೆಸುತ್ತದೆ, ಸಮಾಜವನ್ನು ವಿಭಜಿಸುತ್ತದೆ ಮತ್ತು ಅಸ್ತಿತ್ವದಲ್ಲಿರುವ ಜಾತಿ ಆಧಾರಿತ ಕೋಟಾಗಳನ್ನು ಹೆಚ್ಚಿಸುತ್ತದೆ. ಇದನ್ನು ಜಾತಿಯ ಸುತ್ತ ಕೇಂದ್ರೀಕೃತವಾಗಿರುವ ಪ್ರತಿಯೊಂದು ಪ್ರಗತಿಪರ ಕ್ರಮಗಳ ವಿರುದ್ಧ ಬಳಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT