ಪ್ರಾತಿನಿಧಿಕ ಚಿತ್ರ 
ದೇಶ

ಛತ್ತೀಸ್‌ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥ

ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕೊರ್ಬಾ: ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸಂತ್ರಸ್ತರು, ರಾಮಾನುಜನಗರ ಅಭಿವೃದ್ಧಿ ಬ್ಲಾಕ್‌ನ ವಿಶುನ್‌ಪುರ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಆಹಾರವನ್ನು ಸೇವಿಸಿದ್ದಾರೆ ಎಂದು ಸೂರಜ್‌ಪುರ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್‌ಒ) ಡಾ.ಆರ್.ಎಸ್.ಸಿಂಗ್ ತಿಳಿಸಿದ್ದಾರೆ.

ನಂತರ ಅವರೆಲ್ಲರನ್ನೂ ಸೂರಜ್‌ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಅವರು ಶನಿವಾರ ಸಂಜೆ 'ದಸ್ಗಾತ್ರ' (ವ್ಯಕ್ತಿಯ ಮರಣದ ನಂತರ ಹತ್ತನೇ ದಿನದ ಆಚರಣೆ) ಗಾಗಿ ತಯಾರಿಸಿದ್ದ ಉಳಿದ ಆಹಾರವನ್ನು ಸೇವಿಸಿದ್ದಾರೆ ಎಂದು ಸಿಎಂಎಚ್‌ಒ ತಿಳಿಸಿದ್ದಾರೆ.

ಆಹಾರವನ್ನು ಸೇವಿಸಿದ ಎರಡು-ಮೂರು ಗಂಟೆಗಳ ನಂತರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಜನರು ಅಸ್ವಸ್ಥರಾಗಿದ್ದಾರೆ ಮತ್ತು ಫುಡ್ ಪಾಯಿಸನಿಂಗ್‌ನಂತಹ ಲಕ್ಷಣಗಳ ಬಗ್ಗೆ ದೂರು ನೀಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಲಾಗಿದ್ದು, ವೈದ್ಯರ ನಿಗಾದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT